ಸರ್ಕಾರದ ವಿರುದ್ಧ ಗುಡುಗಿದ ಮಠ ಸಿನಿಮಾ ಖ್ಯಾತಿ ಗುರು ಪ್ರಸಾದ್..! ನನ್ನ ಸಾವಿಗೆ ಸರ್ಕಾರವೇ ಕಾರಣ ಡೆತ್ ನೋಟ್ ಬರೆದ ಡೈರೆಕ್ಟರ್..! ಏನಿದು ಬಡವರ ಮನೆಯ ಒಂದು ಇಡ್ಲಿಯ ಕಥೆ…!

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್ ಅವರಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಬಹಿರಂಗಪಡಿಸಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸುಧಾಕಾರ್, ಮಾಜಿ ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹೀಗೆ ಹಲವರು ರಾಜಕೀಯ ನಾಯಕರ ವಿರುದ್ಧ ಗುಡುಗಿದ್ದಾರೆ.

ನನ್ನ ಸಾವಿಗೆ ಸರ್ಕಾರವೇ ಕಾರಣವೆಂದು ಡೆತ್ ನೋಟ್ ಬರೆಯುವುದಾಗಿ ಹೇಳಿದ್ದಾರೆ. ರಾಜಕೀಯ ಮಾಡಬೇಡಿ, ಆಡಳಿತ ಮಾಡಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಮನೆವರೆಗೂ ಕೊರೊನಾ ಕಳುಹಿಸಿದ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಅವರಿಗೆ ಧನ್ಯವಾದ. ಎಷ್ಟು ಕೋಟಿ ಬೇಕು ನಮಗೆ, ನಿಮ್ಮ ಕೋಟಿ ಎಂದರೆ ಬಡವರ ಮನೆಯ ಒಂದೊಂದು ಇಡ್ಲಿಯನ್ನು ತಂದು ನಿಮ್ಮ ಲಾಕರ್ ನಲ್ಲಿ ಇಡುತ್ತಿದ್ದೀರಿ. ದರಿದ್ರ ಜೀವನ ನಡೆಸಿಲಿಕ್ಕೆ ಎಂದು ಸರ್ಕಾರದ ವಿರುದ್ಧ ಕಿರಿಕಾರಿದ್ದಾರೆ.

https://www.facebook.com/Guruprasadmata/videos/1206848433063292/

ಒಂದು ವೇಳೆ ನಾನು ಸತ್ತರೆ ನನ್ನ ಶಾಪ ಕೊನೆವರೆಗೂ ನಿಮಗೆ ನೋವು. ಒಂದೂವರೆ ವರ್ಷ ಸಮಯ ತೆಗೆದುಕೊಂಡು, 2 ತಿಂಗಳೂ ಲಾಕ್ ಡೌನ್ ಮಾಡಿ ಏನು ಮಾಡಿದ್ರಿ. ನಿಮಗೆ ಕೋಟಿ ಕೋಟಿ ಹಣ ಬಂದಿದೆ ಅಂತ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ತಳ್ಳಬೇಡಿ. ನನಗೆ ಕೊರೋನಾ ತಂದುಕೊಟ್ಟ ನಿಮಗೆ ದಿಕ್ಕಾರವಿರಲಿ. ತುಂಬಾ ಜನರನ್ನು ಸಾಯಿಸಿದ್ದಾರೆ, ಒಂದೂವರೇ ವರ್ಷವಾದರೂ ಏನು ಮಾಡಿಲ್ಲ. ನನ್ನಂತವರಿಗೆ ಕೊಟ್ಟಿದ್ರೆ ಏನೋ ಮಾಡುತ್ತಿದ್ದೆ. ಇನ್ನು ಎಷ್ಟು ಕೋಟಿ ನಿಮಗೆ, ಕೊರೋನಾ ಬಂದರು ಪಾಠ ಕಲಿತಿಲ್ಲ.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್, ಕಾಂಗ್ರೆಸ್ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್ಫೇರ್ ಟೆಂಟ್ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ ಎಂದು ರಾಜಕಾರಣೀಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಸದ್ಯ ಸರ್ಕಾರ ವಿರುದ್ಧ ಗುಡುಗಿರುವ ಡೈರೆಕ್ಟರ್ ಗುರು ಪ್ರಸಾದ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ