ಸರಕಾರಿ ನೌಕರರು ಇನ್ಮುಂದೆ ಕಡ್ಡಾಯವಾಗಿ ಬಳಸಬೇಕಿದೆ ಎಲೆಕ್ಟ್ರಿಕ್ ವಾಹನ! ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅವಶ್ಯಕ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೇಶದಲ್ಲಿ ತೈಲೋತ್ಪನ್ನಗಳ ದರಗಳು ನಿತ್ಯ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿಸುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ದೆಹಲಿಯಲ್ಲಿರುವ ಎಲ್ಲ ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ ಮಾಡಲಾಗುವುದು ಎಂದು ಹೇಳಿದ್ದಾರೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಸಚಿವ ಗಡ್ಕರಿ, ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆ್ಚ್ಚಾಗಬೇಕು. ಈ ಅಭಿಯಾನವನ್ನು ತಮ್ಮ ಇಲಾಖೆಯಿಂದಲೇ ಆರಂಭಿಸುವುದಾಗಿ ಹೇಳಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಂತೆಯೇ ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರಿಗೆ ಸಲಹೆ ನೀಡಿದ ನಿತಿನ್ ಗಡ್ಕರಿ, ತಮ್ಮ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ, ‘ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವಂತೆ ಅವರು ಸಲಹೆ ನೀಡಿದರು. ಒಂದು ಲೆಕ್ಕಾಚಾರದ ಪ್ರಕಾರ, ದೆಹಲಿಯಲ್ಲಿ 10,000 ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಸುಮಾರು 30 ಕೋಟಿ ರೂಪಾಯಿಯಷ್ಟು ಉಳಿತಾಯವಾಗಬಹುದು. ಎಲೆಕ್ಟ್ರಿಕ್ ಅಡುಗೆ ಉಪಕರಣಗಳನ್ನು ಬಳಸುವುದರಿಂದ ಆಮದು ಮಾಡಿದ ಅಡುಗೆ ಅನಿಲ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಬಹುದು ಎಂದು ಹೇಳಿದರು.

ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಚಿವರು ಸಲಹೆ ನೀಡಿದರು. ಅಂತೆಯೇ ನಾವು ವಿದ್ಯುತ್ ಉಪಕರಣಗಳಿಗೆ ಏಕೆ ಸಬ್ಸಿಡಿ ಕೊಡಬಾರದು? ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ