ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತರೇ ಕಾರ್ಯಕ್ರಮಗಳ ಜೊತೆ ಸರಕಾರಿ ಕಾರ್ಯಕ್ರಮಗಳನ್ನು ನಮ್ಮ ಪಾಲುದಾರ ಬಂಧುಗಳಿಗೆ ಪರಿಚಯಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರಣೆ ನೀಡುತಿದ್ದೆವೆ.

ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಊರಿನ ಹಿರಿಯರಾದ ಜಯರಾಮ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಒಕ್ಕೂಟದ ಅಧ್ಯಕ್ಷರಾದ ಆರತಿ ಮತ್ತು ಸೇವಾಪ್ರತಿನಿಧಿ ಸುಶೀಲಮ್ಮ ಉಪಸ್ಥಿತರಿದ್ದರು.

Spread the love
  • Related Posts

    “ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”

    ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗ, ದೂರು ಅರ್ಜಿ ಸಲ್ಲಿಕೆಯಾಗಿದ್ದು ಸದ್ರಿ…

    Spread the love

    ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ

    ಬೆಳ್ತಂಗಡಿ, ಜೂನ್ 29: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಪ್ರದೇಶದಲ್ಲಿ ವಸತಿ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಹಾಟ್ ಮಿಕ್ಸ್ ಹಾಗೂ ಕಾಂಕ್ರೀಟ್ ಮಿಶ್ರಣ ಘಟಕದ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮತ್ತು ಉಪ ವಿಭಾಗಾಧಿಕಾರಿಗಳು…

    Spread the love

    You Missed

    “ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”

    • By admin
    • June 30, 2026
    • 29 views
    “ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ  ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”

    ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ

    • By admin
    • June 30, 2026
    • 90 views
    ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ

    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    • By admin
    • June 27, 2026
    • 29 views
    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    • By admin
    • June 26, 2026
    • 69 views
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 54 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 39 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ