ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತರೇ ಕಾರ್ಯಕ್ರಮಗಳ ಜೊತೆ ಸರಕಾರಿ ಕಾರ್ಯಕ್ರಮಗಳನ್ನು ನಮ್ಮ ಪಾಲುದಾರ ಬಂಧುಗಳಿಗೆ ಪರಿಚಯಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರಣೆ ನೀಡುತಿದ್ದೆವೆ.

ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಊರಿನ ಹಿರಿಯರಾದ ಜಯರಾಮ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಒಕ್ಕೂಟದ ಅಧ್ಯಕ್ಷರಾದ ಆರತಿ ಮತ್ತು ಸೇವಾಪ್ರತಿನಿಧಿ ಸುಶೀಲಮ್ಮ ಉಪಸ್ಥಿತರಿದ್ದರು.

Spread the love
  • Related Posts

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    You Missed

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 6 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 7 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 5 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 9 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 15 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 13 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ