ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತರೇ ಕಾರ್ಯಕ್ರಮಗಳ ಜೊತೆ ಸರಕಾರಿ ಕಾರ್ಯಕ್ರಮಗಳನ್ನು ನಮ್ಮ ಪಾಲುದಾರ ಬಂಧುಗಳಿಗೆ ಪರಿಚಯಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರಣೆ ನೀಡುತಿದ್ದೆವೆ.

ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಊರಿನ ಹಿರಿಯರಾದ ಜಯರಾಮ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಒಕ್ಕೂಟದ ಅಧ್ಯಕ್ಷರಾದ ಆರತಿ ಮತ್ತು ಸೇವಾಪ್ರತಿನಿಧಿ ಸುಶೀಲಮ್ಮ ಉಪಸ್ಥಿತರಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…

    Spread the love

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    • By admin
    • June 26, 2026
    • 48 views
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 46 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 36 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 121 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 30 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 63 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ: