ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತರೇ ಕಾರ್ಯಕ್ರಮಗಳ ಜೊತೆ ಸರಕಾರಿ ಕಾರ್ಯಕ್ರಮಗಳನ್ನು ನಮ್ಮ ಪಾಲುದಾರ ಬಂಧುಗಳಿಗೆ ಪರಿಚಯಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರಣೆ ನೀಡುತಿದ್ದೆವೆ.

ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಊರಿನ ಹಿರಿಯರಾದ ಜಯರಾಮ್ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಒಕ್ಕೂಟದ ಅಧ್ಯಕ್ಷರಾದ ಆರತಿ ಮತ್ತು ಸೇವಾಪ್ರತಿನಿಧಿ ಸುಶೀಲಮ್ಮ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 75 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views