“ಹಡಿಲು ಭೂಮಿ ಕೃಷಿ ಆಂದೋಲನ” ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯ “ಕೇದಾರೋತ್ಥಾನ” ಟ್ರಸ್ಟ್ ಅಧಿಕೃತ ಘೋಷಣೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೇದಾರೋತ್ಥಾನ”ಟ್ರಸ್ಟ್ ಇದರ ವತಿಯಿಂದ ಶಾಸಕರು ಹಾಗೂ ಟ್ರಸ್ಟಿಗಳಿಂದ ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇಂದು ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಲಾಯಿತು.

“ಕೇದಾರೋತ್ಥಾನ” ಟ್ರಸ್ಟ್ ಅಧ್ಯಕ್ಷರು, ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮಾತನಾಡಿ, ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳನ್ನು ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುವ ಉದ್ದೇಶದಿಂದ “ಹಡಿಲು ಭೂಮಿ ಕೃಷಿ ಆಂದೋಲನ” ಹಮ್ಮಿಕೊಳ್ಳಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಕೃಷಿ ಆಸಕ್ತರನ್ನು ಒಳಗೊಂಡ “ಕೇದಾರೋತ್ಥಾನ” ಟ್ರಸ್ಟ್ ಆರಂಭಿಸಲಾಗಿದೆ. ಈ ಟ್ರಸ್ಟ್ ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಿರುತ್ತಾರೆ. ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಟ್ರಸ್ಟ್ ನ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕೇವಲ ಶೇಕಡಾ 30 ರಷ್ಟು ಮಾತ್ರ ಆಹಾರ ಉತ್ಪಾದನೆಯಾಗುತ್ತಿದ್ದು, ಶೇಕಡ 70ರಷ್ಟು ಹೊರಜಿಲ್ಲೆಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇಲ್ಲಿನ ಕೃಷಿ ಭೂಮಿಗಳು ಕಾರ್ಮಿಕರ ಸಮಸ್ಯೆ ಸೇರಿದಂತೆ ಕೆಲವೊಂದು ವ್ಯವಸ್ಥೆಯ ತೊಡಕುಗಳಿಂದ ಹಡಿಲು ಬಿದ್ದಿದೆ. ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಕೃಷಿ ಆಸಕ್ತರ ನೇತೃತ್ವದಲ್ಲಿ ಈ ಹಡಿಲು ಭೂಮಿಗಳನ್ನು ಗುರುತಿಸಿ ಭೂಮಿಯ ಮಾಲಕರ ಒಪ್ಪಿಗೆಯ ಮೇರೆಗೆ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುವುದು. ಭೂಮಿಯ ಮಾಲಕರು ತಾವೇ ಕೃಷಿ ಮಾಡಲು ಬಯಸಿದ್ದಲ್ಲಿ ಅವರಿಗೆ ಸಹಕಾರವನ್ನು ನೀಡಲಾಗುವುದು. ಕೃಷಿ ಭೂಮಿ ಸುತ್ತಮುಲಿನಲ್ಲಿ ಸಮರ್ಪಕ ತೋಡುಗಳ ವ್ಯವಸ್ಥೆ, ಬೆಳೆದಿರುವ ಪೊದೆ, ಗಿಡಗಂಟೆ ಹಲ್ಲುಗಳನ್ನು ತೆಗೆದು ಸಮತಟ್ಟುಗೊಳಿಸಲು ಬೇಕಾಗುವ ಖರ್ಚು ವೆಚ್ಚಗಳು ಸೇರಿದಂತೆ ಕೃಷಿ ಚಟುವಟಿಕೆಗಳನ್ನು ನಡೆಸಲು ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಟ್ರಸ್ಟ್ ಮೂಲಕ ಭರಿಸಲಾಗುವುದು.

ಉಡುಪಿ ಕ್ಷೇತ್ರದಾದ್ಯಂತ 2 ಸಾವಿರ ಎಕರೆ ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡಲು ಯೋಜನೆ ರೂಪಿಸಲಾಗಿದೆ. ಒಂದು ಎಕರೆಗೆ ಸುಮಾರು 25 ಸಾವಿರ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ದಾನಿಗಳ ಸಹಕಾರವನ್ನು ಬಯಸಿದ್ದು, ಆಸಕ್ತರು ಟ್ರಸ್ಟ್ ಮೂಲಕ ಸಹಾಯ ಮಾಡಬಹುದು. ಅಲ್ಲದೆ ಟ್ರಸ್ಟ್ ನಲ್ಲಿ ಹಣ ಜಮಾ ಮಾಡಬಹುದು. ಜಮಾ ಮಾಡಿದವರಿಗೆ ಅದನ್ನು ಬಂದ ಆದಾಯದಲ್ಲಿ ಹಿಂತಿರುಗಿಸುವುದು ಅಥವಾ ಅವರು ಬಯಸಿದಲ್ಲಿ ಅಕ್ಕಿಯನ್ನು ಪಡೆಯಬಹುದು. ಒಟ್ಟಾರೆಯಾಗಿ ದವಸ ಧಾನ್ಯಗಳ ಉತ್ಪಾದನೆ ಜೊತೆ ಅಂತರ್ಜಲ ಮಟ್ಟವೃದ್ದಿಯ ಉದ್ದೇಶದಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನ ಯಶಸ್ವಿಗೊಳಿಸಲು ಕ್ಷೇತ್ರದ ಜನತೆಯ ಸರಕಾರವನ್ನು ಬಯಸುತ್ತೇನೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಪ್ರಗತಿಪರ ಕೃಷಿಕರಾದ ಕುದಿ ಶ್ರೀನಿವಾಸ ಭಟ್, ಕೇದಾರೋತ್ಥಾನ ಟ್ರಸ್ಟ್ ಸದಸ್ಯರಾದ ಮುರಳಿ ಕಡೆಕಾರ್, ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಉಪಸ್ಥಿತರಿದ್ದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️