“ಹಡಿಲು ಭೂಮಿ ಕೃಷಿ ಆಂದೋಲನ” ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯ “ಕೇದಾರೋತ್ಥಾನ” ಟ್ರಸ್ಟ್ ಅಧಿಕೃತ ಘೋಷಣೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೇದಾರೋತ್ಥಾನ”ಟ್ರಸ್ಟ್ ಇದರ ವತಿಯಿಂದ ಶಾಸಕರು ಹಾಗೂ ಟ್ರಸ್ಟಿಗಳಿಂದ ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇಂದು ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಲಾಯಿತು.

“ಕೇದಾರೋತ್ಥಾನ” ಟ್ರಸ್ಟ್ ಅಧ್ಯಕ್ಷರು, ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮಾತನಾಡಿ, ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳನ್ನು ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುವ ಉದ್ದೇಶದಿಂದ “ಹಡಿಲು ಭೂಮಿ ಕೃಷಿ ಆಂದೋಲನ” ಹಮ್ಮಿಕೊಳ್ಳಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಕೃಷಿ ಆಸಕ್ತರನ್ನು ಒಳಗೊಂಡ “ಕೇದಾರೋತ್ಥಾನ” ಟ್ರಸ್ಟ್ ಆರಂಭಿಸಲಾಗಿದೆ. ಈ ಟ್ರಸ್ಟ್ ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಿರುತ್ತಾರೆ. ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಟ್ರಸ್ಟ್ ನ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕೇವಲ ಶೇಕಡಾ 30 ರಷ್ಟು ಮಾತ್ರ ಆಹಾರ ಉತ್ಪಾದನೆಯಾಗುತ್ತಿದ್ದು, ಶೇಕಡ 70ರಷ್ಟು ಹೊರಜಿಲ್ಲೆಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇಲ್ಲಿನ ಕೃಷಿ ಭೂಮಿಗಳು ಕಾರ್ಮಿಕರ ಸಮಸ್ಯೆ ಸೇರಿದಂತೆ ಕೆಲವೊಂದು ವ್ಯವಸ್ಥೆಯ ತೊಡಕುಗಳಿಂದ ಹಡಿಲು ಬಿದ್ದಿದೆ. ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಕೃಷಿ ಆಸಕ್ತರ ನೇತೃತ್ವದಲ್ಲಿ ಈ ಹಡಿಲು ಭೂಮಿಗಳನ್ನು ಗುರುತಿಸಿ ಭೂಮಿಯ ಮಾಲಕರ ಒಪ್ಪಿಗೆಯ ಮೇರೆಗೆ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುವುದು. ಭೂಮಿಯ ಮಾಲಕರು ತಾವೇ ಕೃಷಿ ಮಾಡಲು ಬಯಸಿದ್ದಲ್ಲಿ ಅವರಿಗೆ ಸಹಕಾರವನ್ನು ನೀಡಲಾಗುವುದು. ಕೃಷಿ ಭೂಮಿ ಸುತ್ತಮುಲಿನಲ್ಲಿ ಸಮರ್ಪಕ ತೋಡುಗಳ ವ್ಯವಸ್ಥೆ, ಬೆಳೆದಿರುವ ಪೊದೆ, ಗಿಡಗಂಟೆ ಹಲ್ಲುಗಳನ್ನು ತೆಗೆದು ಸಮತಟ್ಟುಗೊಳಿಸಲು ಬೇಕಾಗುವ ಖರ್ಚು ವೆಚ್ಚಗಳು ಸೇರಿದಂತೆ ಕೃಷಿ ಚಟುವಟಿಕೆಗಳನ್ನು ನಡೆಸಲು ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಟ್ರಸ್ಟ್ ಮೂಲಕ ಭರಿಸಲಾಗುವುದು.

ಉಡುಪಿ ಕ್ಷೇತ್ರದಾದ್ಯಂತ 2 ಸಾವಿರ ಎಕರೆ ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡಲು ಯೋಜನೆ ರೂಪಿಸಲಾಗಿದೆ. ಒಂದು ಎಕರೆಗೆ ಸುಮಾರು 25 ಸಾವಿರ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ದಾನಿಗಳ ಸಹಕಾರವನ್ನು ಬಯಸಿದ್ದು, ಆಸಕ್ತರು ಟ್ರಸ್ಟ್ ಮೂಲಕ ಸಹಾಯ ಮಾಡಬಹುದು. ಅಲ್ಲದೆ ಟ್ರಸ್ಟ್ ನಲ್ಲಿ ಹಣ ಜಮಾ ಮಾಡಬಹುದು. ಜಮಾ ಮಾಡಿದವರಿಗೆ ಅದನ್ನು ಬಂದ ಆದಾಯದಲ್ಲಿ ಹಿಂತಿರುಗಿಸುವುದು ಅಥವಾ ಅವರು ಬಯಸಿದಲ್ಲಿ ಅಕ್ಕಿಯನ್ನು ಪಡೆಯಬಹುದು. ಒಟ್ಟಾರೆಯಾಗಿ ದವಸ ಧಾನ್ಯಗಳ ಉತ್ಪಾದನೆ ಜೊತೆ ಅಂತರ್ಜಲ ಮಟ್ಟವೃದ್ದಿಯ ಉದ್ದೇಶದಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನ ಯಶಸ್ವಿಗೊಳಿಸಲು ಕ್ಷೇತ್ರದ ಜನತೆಯ ಸರಕಾರವನ್ನು ಬಯಸುತ್ತೇನೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಪ್ರಗತಿಪರ ಕೃಷಿಕರಾದ ಕುದಿ ಶ್ರೀನಿವಾಸ ಭಟ್, ಕೇದಾರೋತ್ಥಾನ ಟ್ರಸ್ಟ್ ಸದಸ್ಯರಾದ ಮುರಳಿ ಕಡೆಕಾರ್, ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಉಪಸ್ಥಿತರಿದ್ದರು.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 59 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 22 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 188 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2208 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ