ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 14 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 33 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 51 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 33 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ