ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️