ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 54 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ