ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ