ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ