ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️