ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ