ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ