ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 7 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ