ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ತನ್ಮೂಲಕ ಪರೋಕ್ಷವಾಗಿ ಹಿಂದೂ ಸಮಾಜದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ, ಧಾರ್ಮಿಕ ಭಾವನೆಗಳನ್ನು,ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಿತ ರಕ್ಷಣಾ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ವೃಂದಗಳ ವೇದಿಕೆ ಹಾಗೂ ಇನ್ನಿತರ ಸಂಘಸಂಸ್ಥೆಗಳ ಒಕ್ಕೂಟದಿಂದ ಇಂದು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಪ್ರತಿಭಟನಾಕಾರರು, ದಕ್ಷಿಣ ಭಾರತದ ಮತ್ತು ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಕನಿಷ್ಠ 800 ವರ್ಷಗಳ ಇತಿಹಾಸ ಹೊಂದಿದ್ದು, ದಕ್ಷಿಣ ಕಾಶಿ ಎಂದೇ ಜನಜನಿತ ವಾಗಿರುತ್ತದೆ. ಈ ಕ್ಷೇತ್ರವು ಕೋಟ್ಯಾಂತರ ಭಕ್ತಾದಿಗಳನ್ನು ಭಾಷೆ ಗಡಿಗಳನ್ನು ಮೀರಿ ಪ್ರತಿನಿತ್ಯ ಮೂವತ್ತರಿಂದ ಐವತ್ತು ಸಾವಿರ ಭಕ್ತರು, ವಿಶೇಷ ದಿನಗಳಲ್ಲಿ ಹೊಂದಿದ್ದು ಒಂದು ಲಕ್ಷ ಭಕ್ತರು ಭೇಟಿ ನೀಡುತ್ತಾರೆ ಇಂತಹ ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ನೆಲೆಯೂರಿರುವ ಈ ಪವಿತ್ರ ಸ್ಥಳದ ಹೆಸರನ್ನು ಬಹಳ ಚಾಕಚಕ್ಯತೆಯಿಂದ ಕೇವಲ ಧರ್ಮಸ್ಥಳ ಎಂಬ ಹೆಸರನ್ನೇ ಉಪಯೋಗಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಯವರಿಗೆ ಕಳಂಕ ತರುವಂತಹ, ಪಾವಿತಕ್ಕೆ ಧಕ್ಕೆಯುಂಟು ಮಾಡುವಂತಹ ಕೀಳು ಮಟ್ಟದ ಅಸಾಂವಿಧಾನಿಕ ಭಾಷೆಗಳ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇಡೀ ರಾಜ್ಯಕ್ಕೆ ತಿಳಿದಿದೆ.ಇದು ಶ್ರೀ ಕ್ಷೇತ್ರದ ತೇಜೋವಧೆ ಮಾಡಲೇಂದೇ ಮಾಡುತ್ತಿರುವ ಷಡ್ಯಂತ್ರ ಎಂದು ದಾರಿಯಲ್ಲಿ ಹೋಗುತ್ತಿರುವ ಶ್ರೀಸಾಮಾನ್ಯರಿಗೂ ತಿಳಿಯಲ್ಪಡುವ ವಿಚಾರವಾಗಿದೆ. ಈ ಬೆಳವಣಿಗೆ ಭಕ್ತರ ಮನಸ್ಸಿಗೆ ಅತೀವವಾದ ನೋವುಂಟು ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುತ್ತದೆ.

ಅನಾಮಿಕ ಎಂಬ ವ್ಯಕ್ತಿಯು ನೀಡಿದ ದೂರಿನ ಆಧಾರದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದು ಸಮಸ್ತ ಭಕ್ತಾದಿಗಳು, ಹಿಂದೂ ಬಾಂಧವರೆಲ್ಲರೂ ಗೌರವದಿಂದ ಸ್ವಾಗತಿಸಿ ತನಿಖೆಯು ಅರ್ಥಪೂರ್ಣವಾಗಬೇಕೆಂದು ಬಯಸುತ್ತೇವೆ. ಆದರೆ ಮಾಧ್ಯಮಗಳ ಪ್ರಕಾರ ಆರನೇ ಗುಂಡಿಯನ್ನು ಬಿಟ್ಟರೆ ಇನ್ನೆಲ್ಲೂ ಸಾಕ್ಷಾಧಾರಗಳು ದೊರಕದಿರುವುದು ಹಾಗೂ ಇತ್ತೀಚಿಗಂತೂ ಪವಿತ್ರವಾದ ಬೆಟ್ಟದ ಬುಡದಲ್ಲೂ ಸಹ ಉತ್ಪನ್ನ ಮಾಡಿದ ನಂತರವೂ ಸಹ ಯಾವ ಸಾಕ್ಷಾಧಾರಗಳು ದೊರಕದಿರುವುದು ಸಾರ್ವಜನಿಕರ ಗಮನಕ್ಕೆ ಬಂದಿರುತ್ತದೆ. ಅನಾಮಿಕನ ಉದ್ದೇಶವೇ ಅನುಮಾನಾಸ್ಪದವಾಗಿ ಕಂಡು ಬರುತ್ತಿರುವುದು ಗೋಡೆಯ ಮೇಲಿನ ಬರಹದಂತೆ ನಿಚ್ಚಳವಾಗಿದೆ ಎಂದರು.ಅನಾಮಿಕನನ್ನು ಮಂಪರು ಪರೀಕ್ಷೆ ಇತ್ಯಾದಿ ಪರೀಕ್ಷೆಗಳ ಮೂಲಕ ಸಂಪೂರ್ಣವಾಗಿ ತನಿಖೆಗೊಳ ಪಡಿಸಬೇಕು ಹಾಗೂ ಆತನ ಬೆಂಬಲಕ್ಕೆ ನಿಂತಿರುವ, ಹಿಂದಿರುವವರ ಬಗ್ಗೆ ಸಹ ಸಂಪೂರ್ಣವಾದ ತನಿಖೆಯನ್ನು ನಡೆಸಬೇಕೆಂದು, ಈ ಬಗ್ಗೆ ತನಿಖಾ ವರದಿಯನ್ನು ಸಾರ್ವಜನಿಕರ ಅನುಮಾನಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ತಿಳಿಸಬೇಕು ಧರ್ಮಾಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ, ಕ್ಷೇತ್ರದ ಪಾವಿತ್ರ ಧಕ್ಕೆ ತರುತ್ತಿರುವವರ ವಿರುದ್ಧ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು, ವಕೀಲರು, ಬಿಜೆಪಿ ಕಾರ್ಯಕರ್ತರು, ಸ್ಥಳೀಯ ಸಂಘ-ಸಂಸ್ಥೆಯವರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 42 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 34 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 40 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 35 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ