ಕೊಡಗಿನಲ್ಲೂ ವರುಣಾರ್ಭಟ ಕೆಲವೆಡೆ ಭೂ ಕುಸಿತ!

ಕೊಡಗು: ಕೊಡಗು ಜಿಲ್ಲೆಯಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮಡಿಕೇರಿ ಸಮೀಪದ ಅಭ್ಯತ್ ಮಂಗಲದ ಬಳಿ ಭೂಕುಸಿತವಾಗಿದೆ. ಸುಮಾರು 50 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಮಡಿಕೇರಿಯಿಂದ ಸಿದ್ದಾಪುರ ರಸ್ತೆ ಸಂಪರ್ಕ ಬಂದ್ ಮಾಡಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್‌ ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ ಜಿಲ್ಲೆಯಲ್ಲಿ ಆಶ್ಲೇಷ ಮಳೆ ಆರ್ಭಟಿಸುತ್ತಿದ್ದು, ಕಾವೇರಿ ಉಕ್ಕಿ ಹರಿಯುತ್ತಿದೆ. ‌ಭಾರಿ ಗಾಳಿ-ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.‌ ನಾಪೋಕ್ಲುವಿನಲ್ಲಿ ರಸ್ತೆ ಮೇಲೆ ನದಿ ನೀರು ಹರಿಯುತ್ತಿದ್ದು, ನಾಪೋಕ್ಲು- ಮೂರ್ನಾಡು ರಸ್ತೆ ಸಂಪರ್ಕ ಬಂದ್ ಆಗಿದೆ. ಜಡಿ ಮಳೆಗೆ ನಾಪೋಕ್ಲು‌ ಸರ್ಕಾರಿ ಶಾಲಾ ಕಟ್ಟಡದ ಮೇಲೆ ಬೃಹತ್ ಮರ ಬಿದ್ದಿದ್ದು ಕುಶಾಲನಗರದ ಸಮೀಪ ಬಸವನಹಳ್ಳಿ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಹೆದ್ದಾರಿ ಬಂದ್ ಆಗಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ.

READ ALSO