ಗಡಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆದ ಮೋದಿ ನಿರ್ಧಾರಕ್ಕೆ ಮಾಜಿ ಪ್ರಧಾನಿ HDD ಮೆಚ್ಚುಗೆ

ಬೆಂಗಳೂರು: ಲಡಾಖ್​ನ ಗಾಲ್ವನ್​​​ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್​ ಮಾಡಿದ್ದಾರೆ.

ಕಳೆದ ಸೋಮವಾರ ರಾತ್ರಿ ಉಭಯ ದೇಶದ ಸೈನಿಕರ ನಡುವಿನ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರಲ್ಲಿ ಮುಂದಿನ ಕ್ರಮಗಳ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ.

ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ಉಭಯ ದೇಶಗಳ ನಡುವೆ ಈಗಾಗಲೇ ಹಲವು ಸುತ್ತುಗಳ ಮಾತುಕತೆ ನಡೆದಿದೆ. ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಘರ್ಷಣೆಯ ಬಗ್ಗೆ ಮಾಹಿತಿ ಹಂಚಿಕೊಂಡಾಗ ಮಾತ್ರ ವಿಪಕ್ಷಗಳು ತಮ್ಮ ಅಭಿಪ್ರಾಯ ತಿಳಿಸಲು ಸಾಧ್ಯ. ನಮಗೆ ಕೇವಲ ಮಾಧ್ಯಮಗಳ ಮೂಲಕ ವಿಚಾರಗಳು ತಿಳಿಯುತ್ತಿದೆ. ಅದನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ವಿಪಕ್ಷಗಳಲ್ಲೂ ಮನವಿ ಮಾಡಿಕೊಂಡಿರುವ ದೇವೇಗೌಡರು, ಭಾರತ-ಚೀನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಸಂಯಮದಿಂದ ವರ್ತಿಸಬೇಕಾದ ಸ್ಥಿತಿಯಿದೆ. ರಾಷ್ಟ್ರೀಯ ಭದ್ರತೆ ಹಿತದೃಷ್ಠಿಯಿಂದ ಸರ್ಕಾರಕ್ಕೆ ನಾವು ಸಹಕಾರ ನೀಡಬೇಕು. ಆದರೆ ಸರ್ಕಾರವನ್ನು ಪ್ರಶ್ನೆ ಮಾಡುವ ಹಕ್ಕು ನಿಮಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಭಾರತೀಯ ಸೇನೆಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿರುವುದು ಅಪಾಯಕಾರಿ ಎಂದು ದೇವೇಗೌಡರು ಎಚ್ಚರಿಸಿದ್ದಾರೆ

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ