ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ ದಿನಗಳಲ್ಲಿ ಯುವಕರನ್ನು ಸಹ ಬಿಡುತ್ತಿಲ್ಲ. ಅಂದರೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅನೇಕ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅದರಲ್ಲೂ ವಿಶೇಷವಾಗಿ ಪುರುಷರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯವಾಗಿ ನಾನಾ ಕಾರಣಗಳಿವೆ. ಅದರಲ್ಲಿ ಜೀವನಶೈಲಿ, ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳು, ಮಾನಸಿಕ ಒತ್ತಡ, ಅನುವಂಶಿಕ ಸಮಸ್ಯೆಗಳು ಪ್ರಮುಖವಾಗಿದೆಅನೇಕ ಪುರುಷರು ಆಫೀಸಿನಲ್ಲಿ ಗಂಟೆಗಳ ಕಾಲ ಕುಳಿತಲ್ಲೇ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಅಲ್ಲದೇ ತರಕಾರಿಗಳು ಮತ್ತು ಹಣ್ಣುಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವ ಬದಲು ಜಂಕ್ ಫುಡ್‌ಗಳ ಮೊರೆ ಹೋಗಿದ್ದಾರೆ. ಇವುಗಳ ಸೆವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.ಇದರಿಂದಾಗಿ ಹೃದಯಕ್ಕೆ ಸಾಕಷ್ಟು ರಕ್ತದ ಹರಿವು ಆಗುವುದಿಲ್ಲ. ಹೃದಯಕ್ಕೆ ಆಮ್ಲಜನಕದ ಪೂರೈಕೆ ಕೂಡ ಕಡಿಮೆ ಆಗುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ಹಾರ್ಟ್ ಅಟ್ಯಾಕ್ಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಮಾನಸಿಕ ಒತ್ತಡ. ಪುರುಷರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಸದಾ ಒತ್ತಡದ ಮಧ್ಯೆ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ.ಈ ಒತ್ತಡವು ಹೃದಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಇಂತಹ ಸಮಯದಲ್ಲಿ ದುಃಖ ಮತ್ತು ನಕಾರಾತ್ಮಕ ಭಾವನೆಗಳು ಹೃದಯ ಬಡಿತವನ್ನು ಹೆಚ್ಚಿಸುತ್ತವೆ ಮತ್ತು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ.ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ.

ಅನೇಕ ಪುರುಷರು ಕಚೇರಿಗಳಲ್ಲಿ ದೀರ್ಘಕಾಲ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಹೀಗೆ ಕುರ್ಚಿಯ ಮೇಲೆ ಹೆಚ್ಚು ಸಮಯ ಕುಳಿತುಕೊಂಡೇ ಕಳೆಯುವುದರಿಂದ ದೇಹಕ್ಕೆ ಯಾವುದೇ ವ್ಯಾಯಾಮ ಸಿಗುವುದಿಲ್ಲ. ದೈಹಿಕ ವ್ಯಾಯಾಮದ ಕೊರತೆಯು ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ. ಆದರೆ, ಇದು ಹೃದಯಕ್ಕೆ ಅಪಾಯಕಾರಿ ಆಗಿದೆ.ಪುರುಷರಲ್ಲಿ ಆನುವಂಶಿಕ ಹೃದಯ ಅಸ್ವಸ್ಥತೆಗಳು ಪ್ರಮುಖ ಅಂಶವಾಗಿದೆ. ವಯಸ್ಕರಿಗೆ ಹೃದ್ರೋಗ, ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿದ್ದರೆ, ಆ ಸಮಸ್ಯೆಗಳನ್ನು ಆನುವಂಶಿಕವಾಗಿ ಪಡೆಯಬಹುದು. ಇದರರ್ಥ ಹೃದಯಾಘಾತಕ್ಕೆ ಒಳಗಾದ ಅಜ್ಜಿಯರು ಅಥವಾ ಇತರ ಕುಟುಂಬದ ಸದಸ್ಯರು ಅನುಭವಿಸಿದ ಅಪಾಯ ನಿಮಗೂ ಆಗಬಹುದು.

ಇವುಗಳಲ್ಲದೇ ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಧೂಮಪಾನವು ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ಅಧಿಕ ತೂಕವು ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.ಒಟ್ಟಾರೆ, ಪುರುಷರಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಜೀವನಶೈಲಿ, ಅವರ ಆಹಾರ ಪದ್ಧತಿ, ದೈಹಿಕ ವ್ಯಾಯಾಮ, ಮಾನಸಿಕ ಒತ್ತಡ ಮತ್ತು ಅನುವಂಶಿಕ ಅಂಶಗಳ ಮೇಲೆ ಅವಲಂಬಿತವಾಗಿದೆ. ನಾವು ಪ್ರತಿದಿನ ನಮ್ಮ ಜೀವನಶೈಲಿಯ ಬಗ್ಗೆ ಕೇಂದ್ರೀಕರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್