ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ ದಿನಗಳಲ್ಲಿ ಯುವಕರನ್ನು ಸಹ ಬಿಡುತ್ತಿಲ್ಲ. ಅಂದರೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅನೇಕ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅದರಲ್ಲೂ ವಿಶೇಷವಾಗಿ ಪುರುಷರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯವಾಗಿ ನಾನಾ ಕಾರಣಗಳಿವೆ. ಅದರಲ್ಲಿ ಜೀವನಶೈಲಿ, ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳು, ಮಾನಸಿಕ ಒತ್ತಡ, ಅನುವಂಶಿಕ ಸಮಸ್ಯೆಗಳು ಪ್ರಮುಖವಾಗಿದೆಅನೇಕ ಪುರುಷರು ಆಫೀಸಿನಲ್ಲಿ ಗಂಟೆಗಳ ಕಾಲ ಕುಳಿತಲ್ಲೇ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಅಲ್ಲದೇ ತರಕಾರಿಗಳು ಮತ್ತು ಹಣ್ಣುಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವ ಬದಲು ಜಂಕ್ ಫುಡ್‌ಗಳ ಮೊರೆ ಹೋಗಿದ್ದಾರೆ. ಇವುಗಳ ಸೆವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.ಇದರಿಂದಾಗಿ ಹೃದಯಕ್ಕೆ ಸಾಕಷ್ಟು ರಕ್ತದ ಹರಿವು ಆಗುವುದಿಲ್ಲ. ಹೃದಯಕ್ಕೆ ಆಮ್ಲಜನಕದ ಪೂರೈಕೆ ಕೂಡ ಕಡಿಮೆ ಆಗುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ಹಾರ್ಟ್ ಅಟ್ಯಾಕ್ಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಮಾನಸಿಕ ಒತ್ತಡ. ಪುರುಷರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಸದಾ ಒತ್ತಡದ ಮಧ್ಯೆ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ.ಈ ಒತ್ತಡವು ಹೃದಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಇಂತಹ ಸಮಯದಲ್ಲಿ ದುಃಖ ಮತ್ತು ನಕಾರಾತ್ಮಕ ಭಾವನೆಗಳು ಹೃದಯ ಬಡಿತವನ್ನು ಹೆಚ್ಚಿಸುತ್ತವೆ ಮತ್ತು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ.ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ.

ಅನೇಕ ಪುರುಷರು ಕಚೇರಿಗಳಲ್ಲಿ ದೀರ್ಘಕಾಲ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಹೀಗೆ ಕುರ್ಚಿಯ ಮೇಲೆ ಹೆಚ್ಚು ಸಮಯ ಕುಳಿತುಕೊಂಡೇ ಕಳೆಯುವುದರಿಂದ ದೇಹಕ್ಕೆ ಯಾವುದೇ ವ್ಯಾಯಾಮ ಸಿಗುವುದಿಲ್ಲ. ದೈಹಿಕ ವ್ಯಾಯಾಮದ ಕೊರತೆಯು ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ. ಆದರೆ, ಇದು ಹೃದಯಕ್ಕೆ ಅಪಾಯಕಾರಿ ಆಗಿದೆ.ಪುರುಷರಲ್ಲಿ ಆನುವಂಶಿಕ ಹೃದಯ ಅಸ್ವಸ್ಥತೆಗಳು ಪ್ರಮುಖ ಅಂಶವಾಗಿದೆ. ವಯಸ್ಕರಿಗೆ ಹೃದ್ರೋಗ, ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿದ್ದರೆ, ಆ ಸಮಸ್ಯೆಗಳನ್ನು ಆನುವಂಶಿಕವಾಗಿ ಪಡೆಯಬಹುದು. ಇದರರ್ಥ ಹೃದಯಾಘಾತಕ್ಕೆ ಒಳಗಾದ ಅಜ್ಜಿಯರು ಅಥವಾ ಇತರ ಕುಟುಂಬದ ಸದಸ್ಯರು ಅನುಭವಿಸಿದ ಅಪಾಯ ನಿಮಗೂ ಆಗಬಹುದು.

ಇವುಗಳಲ್ಲದೇ ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಧೂಮಪಾನವು ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ಅಧಿಕ ತೂಕವು ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.ಒಟ್ಟಾರೆ, ಪುರುಷರಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಜೀವನಶೈಲಿ, ಅವರ ಆಹಾರ ಪದ್ಧತಿ, ದೈಹಿಕ ವ್ಯಾಯಾಮ, ಮಾನಸಿಕ ಒತ್ತಡ ಮತ್ತು ಅನುವಂಶಿಕ ಅಂಶಗಳ ಮೇಲೆ ಅವಲಂಬಿತವಾಗಿದೆ. ನಾವು ಪ್ರತಿದಿನ ನಮ್ಮ ಜೀವನಶೈಲಿಯ ಬಗ್ಗೆ ಕೇಂದ್ರೀಕರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ