ಶೃಂಗೇರಿ ಶಾರದಾಂಬ ದೇಗುಲಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಪ್ರಮುಖ ಸೂಚನೆ ನೀಡಿದೆ

ಶೃಂಗೇರಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಪಾಯದ ಮಟ್ಟವನ್ನು ಮೀರಿ ತುಂಗಾ ನದಿ ಹರಿಯುತ್ತಿದೆ.ಇದರಿಂದ ದೇವಾಲಯದ ಸುತ್ತಮುತ್ತ ಪ್ರವಾಹ ಉಂಟಾಗಿದ್ದು, ದೇಗುಲದ ಬಳಿಯಿರುವ ಸ್ನಾನಘಟ್ಟ ಮುಳುಗಡೆಯಾಗಿದೆ. ಶೃಂಗೇರಿಯ ಐಬಿ ಮತ್ತು ಮಠದಲ್ಲಿರುವ ಮಳೆ ಮಾಪಕದ ಪ್ರಕಾರ, ಭಾನುವಾರ ಬೆಳಗ್ಗೆ 6.00 ರಿಂದ ಸೋಮವಾರ ಬೆಳಗ್ಗೆ 6.00 ವರೆಗೆ ಬರೋಬ್ಬರಿ ಆರು ಇಂಚು ಅಂದರೆ ಸುಮಾರು 15 cm ಕ್ಕೂ ಅಧಿಕ ಮಳೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೇ ನೆರೆ ನೀರಿನಿಂದಾಗಿ ದೇಗುಲ ಸಮೀಪದ ಗಾಂಧಿ ಮೈದಾನ ಸಂಪೂರ್ಣ ಜಲಾವೃತವಾಗಿದ್ದು, ಹಲವು ಅಂಗಡಿ ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ. ಜೊತೆಗೆ ಮೈದಾನದಲ್ಲಿ ಜಾನುವಾರುಗಳನ್ನು ಬೋಟ್ ಮೂಲಕ ಸ್ಥಳಾಂತರಿಸಲಾಗಿದೆ. ಸದ್ಯ ಗಾಂಧಿ ಮೈದಾನದಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ವಾಹನಗಳನ್ನು ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಟ್ಯಾಕ್ಟರ್ ಮೂಲಕ ಎಳೆದು ಹೊರ ತಂದಿದ್ದಾರೆ. ಶೃಂಗೇರಿಯ ಪ್ಯಾರಲಲ್ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಬ್ಯಾರಿಕೇಡ್ ಹಾಕಲಾಗಿದೆ.

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 5 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 8 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 10 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ