ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ

ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ ಡಬಲ್ ಆಗಿದೆ. ಇದರಿಂದ ನವಯುಗ ಕಂಪೆನಿಗೆ ಪರೋಕ್ಷವಾಗಿ ಪ್ರತಿಭಟನೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಪಿಸುಮಾತು ಕೇಳಿ ಬರುತ್ತಿದೆ. ಈ ಹಿಂದೆ ಸುರತ್ಕಲ್ ಟೋಲ್ ನಲ್ಲಿ ನಡೆಸಬೇಕಾಗಿದ್ದ ಮೈಂಟೆನೆನ್ಸ್ ಚಾರ್ಚ್ ನವಯುಗ ಕಂಪೆನಿಗೆ ಸಂಪೂರ್ಣ ಉಳಿತಾಯವಾಗಿದೆ.

ಸುರತ್ಕಲ್‌ನಲ್ಲಿ ಈ ಹಿಂದೆ ವಸೂಲಿ ಮಾಡುತ್ತಿದ್ದ ಸಂಪೂರ್ಣ ಟೋಲ್‌ನ್ನು ಹೆಜಮಾಡಿಯಲ್ಲಿ ಸೇರಿಸಿ ವಸೂಲಿ ಮಾಡಲು ಆದೇಶ ಮಾಡಲಾಗಿದೆ. ಹೀಗಾಗಿ ಸುರತ್ಕಲ್ ಟೋಲ್ ಗೇಟ್ ರದ್ದಾದರೂ ಪ್ರಯಾಣಿಕರು ಹೆಜಮಾಡಿಯಲ್ಲಿ ಇನ್ನು ಮುಂದೆ ಹೆಚ್ಚುವರಿ ಟೋಲ್ ಪಾವತಿಸಬೇಕಿದೆ.

ಈ ಹಿಂದೆ ಸುರತ್ಕಲ್ ಟೋಲ್ ಗೇಟ್‌ನಲ್ಲಿ ಕೆಎ-19 ಖಾಸಗಿ ವಾಹನಗಳಿಗೆ ಟೋಲ್ ರಿಯಾಯಿತಿ ಇತ್ತು. ಇನ್ನು ಮುಂದೆ ಈ ರಿಯಾಯಿತಿ ಇರುವುದಿಲ್ಲ. ಸುರತ್ಕಲ್ ಟೋಲ್‌ನಲ್ಲಿ ಹಿಂದೆ ಬೇರೆ ವಾಹನಗಳು ಎಷ್ಟು ಟೋಲ್ ಕಟ್ಟುತ್ತಿದ್ದವೋ ಅದನ್ನು ಸೇರಿಸಿ ಹೆಜಮಾಡಿಯಲ್ಲಿ ಕಟ್ಟಬೇಕಿದೆ.

ಪರಿಷ್ಕೃತ ದರ

ಕಾರು ಜೀಪು ವ್ಯಾನ್ ಸೇರಿ ಲಘು ವಾಹನಗಳಿಗೆ ಸಿಂಗಲ್ ಟ್ರಿಪ್ 100 ರು., ರಿಟರ್ನ್ ಟ್ರಿಪ್ 155 ರು, ತಿಂಗಳ ಪಾಸ್ (50 ಸಿಂಗಲ್ ಟ್ರಿಪ್‌ಗಳಿಗೆ) 3460 ರು., ಲಘು ವಾಣಿಜ್ಯ ವಾಹನಗಳು, ಲಘು ಗೂಡ್ಸ್, ಮಿನ್ ಬಸ್‌ಗಳಿಗೆ ಸಿಂಗಲ್ ಟ್ರಿಪ್ 170 ರು., ರಿಟರ್ನ್ ಟ್ರಿಪ್ 250 ರು. ತಿಂಗಳ ಪಾಸ್ 5590 ರು., ಬಸ್, ಟ್ರಕ್ (6 ಆಕ್ಸೆಲ್)ಗಳಿಗೆ ಸಿಂಗಲ್ ಟ್ರಿಪ್‌ಗೆ 355 ರು., ರಿಟರ್ನ್ ಟ್ರಿಪ್‌ಗೆ 565 ರು., ತಿಂಗಳ ಪಾಸ್‌ಗೆ 11,705 ರು., ಭಾರಿ ನಿರ್ಮಾಣ ಯಂತ್ರಗಳು, ಜೆಸಿಬಿಗಳು, ಮಲ್ಟಿ ಆಕ್ಸೆಲ್ ವಾಹನಗಳಿಗೆ ಸಿಂಗಲ್ ಟ್ರಿಪ್‌ಗೆ 550 ರು., ರಿಟರ್ನ್ ಟ್ರಿಪ್‌ಗೆ 865 ರು., ತಿಂಗಳ ಪಾಸ್‌ಗೆ 18,360 ರು., ಏಳಕ್ಕಿಂತ ಹೆಚ್ಚು ಆಕ್ಸೆಲ್ ವಾಹನಗಳಿಗೆ ಸಿಂಗಲ್ ಟ್ರಿಪ್‌ಗೆ 675 ರು., ರಿಟರ್ನ್ ಟ್ರಿಪ್‌ಗೆ 1005 ರು., ತಿಂಗಳ ಪಾಸ್‌ಗೆ 22,350 ರು. ಸುಂಕ ನಿಗದಿ ಮಾಡಲಾಗಿದೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 114 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 33 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 41 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ