ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಕನ್ಯಾಡಿ ಶ್ರೀಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಲ್ಮಂಜ ಗ್ರಾಮದಲ್ಲಿರುವ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಕೈಗೊಂಡ ಚಾತುರ್ಮಾಸ್ಯ ವ್ರತ ಸಂದರ್ಭಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ || ಧರ್ಮಸ್ಥಳ ಇದರ ಪದಾಧಿಕಾರಿಗಳು ಗೌರವಿಸಿದರು.

ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿದ ಪೂಜ್ಯನೀಯ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಮಕ್ಕಳಿಗೆ ಪ್ರೇರಣೆಯನ್ನು ತುಂಬುವ ಕೆಲಸ, ಆಧ್ಯಾತ್ಮ ಯುತವಾದ ಮೌಲ್ಯಗಳು ಪ್ರೇರಣೆಗಳು ಬರಬೇಕು ಇವತ್ತು ಸಮಾಜ ಸ್ವಲ್ಪ ಹಿಮ್ಮುಖವಾಗಿ ಹೋಗಿದ್ದು ನಮ್ಮ ಯುವ ಜನತೆ ಮೊಬೈಲ್, ಸುಖ ಭೋಗದ ಹಿಂದೆ ಬಿದ್ದಿದ್ದು ಶಾರೀರಿಕ ಸುಖ ಮನಸಿನ ಸುಖ ಎಲ್ಲವೂ, ಆಧ್ಯಾತ್ಮದಿಂದ ಮಾತ್ರ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಸುತ್ತದೆ.
ನೈಜವಾದ ಧರ್ಮದ ಶಿಕ್ಷಣ ಮಕ್ಕಳಿಗೆ ಸಿಕ್ಕಾಗ ಆ ಮಗು ಧರ್ಮವನ್ನು ಪರಿಪಾಲಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಮಕ್ಕಳಿಗೆ ಯಾವ ವಿಚಾರಧಾರೆಯನ್ನು ನೀಡಿದರು ಅದನ್ನು ಸ್ವೀಕರಿಸುವ ಗುಣ ಮಗುವಿಗೆ ಇದೆ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಗಿಡಕ್ಕೆ ಸರಿಯಾಗಿ ಪಾಲನೆ ಪೋಷಣೆ ಮಾಡಿ ಬೆಳೆಸಿದರೆ ಅದು ಹೆಮ್ಮರವಾಗಿ ಬೆಳೆದು ನೆರಳನ್ನು ನೀಡುತ್ತದೆ.
ಹಾಗೆಯೇ ಮಕ್ಕಳಿಗೆ ಬಾಲ್ಯ ಶಿಕ್ಷಣವನ್ನು ಸರಿಯಾಗಿಸಂಸ್ಕಾರಯುತವಾಗಿ ನೀಡಿದರೆ ಆ ಮಗು ದೇಶದ ಸರ್ವಶ್ರೇಷ್ಠ ಪ್ರಜೆಯಾಗುತ್ತಾನೆ. ಮಕ್ಕಳಿಗೆ ಭಗವದ್ಗೀತೆ, ಧರ್ಮದ ವಿಚಾರಗಳನ್ನು ಭೋದಿಸುವ ಕಾರ್ಯ ಆಗಬೇಕಿದೆ. ಮಗುವಿನ ಪೋಷಕರು ಆ ಮಗುವಿನ ಪೂರ್ಣ ಪ್ರಮಾಣದ ಬೆಳವಣಿಗೆಗೆ ಸಹಾಯಕರಾಗುತ್ತಾರೆ. ಮಕ್ಕಳನ್ನು ಒತ್ತಡ ರಹಿತವಾಗಿ ಪ್ರೀತಿಯಿಂದ ಸಾಕಿ ಸಲಹಿ, ಮಹಾಭಾರತ,ರಾಮಾಯಣದ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಹಾಗೂ ಉತ್ತಮ ವಿಚಾರಧಾರೆಗಳನ್ನು ಕಲಿಸುವ ಗುರುಗಳಾಗಿ ಪೋಷಕರು ಪ್ರಮುಖ ಪಾತ್ರವಹಿಸಬೇಕೆಂದರು.

ಇದೆ ಸಂದರ್ಭ ಓಂಕಾರೇಶ್ವರ ಭಜನಾ ಮಂಡಳಿಯ ಸದಸ್ಯರನ್ನೊಳಗೊಂಡು ಭಜನಾ ಕಾರ್ಯಕ್ರಮ ಮತ್ತು ಶ್ರೀ ಗಣೇಶೋತ್ಸವ ಸಮಿತಿಯು ವಿದ್ಯಾರ್ಥಿಗಳಿಗಾಗಿ ನಡೆಸಿದ ಶ್ಲೋಕ ಕಂಠಪಾಠ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನವನ್ನು ಪೂಜ್ಯನೀಯ ಸ್ವಾಮೀಜಿಯವರು ವಿತರಿಸಿದರು.

ಶ್ರೀ ರಾಮ ಕ್ಷೇತ್ರದ ವ್ಯವಸ್ಥಾಪಕರಾದ ಧರ್ಮಣ್ಣ ಗೌಡ ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಪಿ , ಕಾರ್ಯದರ್ಶಿ ಗಣೇಶ್ ಬಜಿಲ, ಸಮಿತಿಯ ಪ್ರಮುಖರಾದ ರಾಘವ ಕುರ್ಮಣಿ, ನವೀನ್ ಕನ್ಯಾಡಿ, ವಸಂತ್ ನಾಯ್ಕ, ಪ್ರೀತಮ್ ಧರ್ಮಸ್ಥಳ , ಸುಂದರ ಗೌಡ , ನಿಶಾನ್ ನಾರ್ಯ , ಮಹಾಬಲ ನಾಯ್ಕ, ಸ್ವಸ್ತಿಕ್ ಕನ್ಯಾಡಿ , ಸುಂದರೇಶ್ , ಪುರಂದರ , ಸೃಜನ್ , ರಮೇಶ್ , ಶ್ರೀಮತಿ ಧನಲಕ್ಸ್ಮಿ ಜನಾರ್ಧನ್ , ಶ್ರೀಮತಿ ಚಂದ್ರಾವತಿ , ಶ್ರೀಮತಿ ವೇದಾವತಿ ,ಶ್ರೀಮತಿ ಸುಧಾ , ಶ್ರೀಮತಿ ಯಶೋಧ, ಶ್ರೀಮತಿ ಸುಂದರಿ , ಕು. ಯಶಸ್ವಿನಿ, ಸಂತೋಷ್ ಹಾಗೂ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    You Missed

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 4 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 7 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 8 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 13 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ