ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಕನ್ಯಾಡಿ ಶ್ರೀಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಲ್ಮಂಜ ಗ್ರಾಮದಲ್ಲಿರುವ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಕೈಗೊಂಡ ಚಾತುರ್ಮಾಸ್ಯ ವ್ರತ ಸಂದರ್ಭಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ || ಧರ್ಮಸ್ಥಳ ಇದರ ಪದಾಧಿಕಾರಿಗಳು ಗೌರವಿಸಿದರು.

ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿದ ಪೂಜ್ಯನೀಯ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಮಕ್ಕಳಿಗೆ ಪ್ರೇರಣೆಯನ್ನು ತುಂಬುವ ಕೆಲಸ, ಆಧ್ಯಾತ್ಮ ಯುತವಾದ ಮೌಲ್ಯಗಳು ಪ್ರೇರಣೆಗಳು ಬರಬೇಕು ಇವತ್ತು ಸಮಾಜ ಸ್ವಲ್ಪ ಹಿಮ್ಮುಖವಾಗಿ ಹೋಗಿದ್ದು ನಮ್ಮ ಯುವ ಜನತೆ ಮೊಬೈಲ್, ಸುಖ ಭೋಗದ ಹಿಂದೆ ಬಿದ್ದಿದ್ದು ಶಾರೀರಿಕ ಸುಖ ಮನಸಿನ ಸುಖ ಎಲ್ಲವೂ, ಆಧ್ಯಾತ್ಮದಿಂದ ಮಾತ್ರ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಸುತ್ತದೆ.
ನೈಜವಾದ ಧರ್ಮದ ಶಿಕ್ಷಣ ಮಕ್ಕಳಿಗೆ ಸಿಕ್ಕಾಗ ಆ ಮಗು ಧರ್ಮವನ್ನು ಪರಿಪಾಲಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಮಕ್ಕಳಿಗೆ ಯಾವ ವಿಚಾರಧಾರೆಯನ್ನು ನೀಡಿದರು ಅದನ್ನು ಸ್ವೀಕರಿಸುವ ಗುಣ ಮಗುವಿಗೆ ಇದೆ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಗಿಡಕ್ಕೆ ಸರಿಯಾಗಿ ಪಾಲನೆ ಪೋಷಣೆ ಮಾಡಿ ಬೆಳೆಸಿದರೆ ಅದು ಹೆಮ್ಮರವಾಗಿ ಬೆಳೆದು ನೆರಳನ್ನು ನೀಡುತ್ತದೆ.
ಹಾಗೆಯೇ ಮಕ್ಕಳಿಗೆ ಬಾಲ್ಯ ಶಿಕ್ಷಣವನ್ನು ಸರಿಯಾಗಿಸಂಸ್ಕಾರಯುತವಾಗಿ ನೀಡಿದರೆ ಆ ಮಗು ದೇಶದ ಸರ್ವಶ್ರೇಷ್ಠ ಪ್ರಜೆಯಾಗುತ್ತಾನೆ. ಮಕ್ಕಳಿಗೆ ಭಗವದ್ಗೀತೆ, ಧರ್ಮದ ವಿಚಾರಗಳನ್ನು ಭೋದಿಸುವ ಕಾರ್ಯ ಆಗಬೇಕಿದೆ. ಮಗುವಿನ ಪೋಷಕರು ಆ ಮಗುವಿನ ಪೂರ್ಣ ಪ್ರಮಾಣದ ಬೆಳವಣಿಗೆಗೆ ಸಹಾಯಕರಾಗುತ್ತಾರೆ. ಮಕ್ಕಳನ್ನು ಒತ್ತಡ ರಹಿತವಾಗಿ ಪ್ರೀತಿಯಿಂದ ಸಾಕಿ ಸಲಹಿ, ಮಹಾಭಾರತ,ರಾಮಾಯಣದ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಹಾಗೂ ಉತ್ತಮ ವಿಚಾರಧಾರೆಗಳನ್ನು ಕಲಿಸುವ ಗುರುಗಳಾಗಿ ಪೋಷಕರು ಪ್ರಮುಖ ಪಾತ್ರವಹಿಸಬೇಕೆಂದರು.

ಇದೆ ಸಂದರ್ಭ ಓಂಕಾರೇಶ್ವರ ಭಜನಾ ಮಂಡಳಿಯ ಸದಸ್ಯರನ್ನೊಳಗೊಂಡು ಭಜನಾ ಕಾರ್ಯಕ್ರಮ ಮತ್ತು ಶ್ರೀ ಗಣೇಶೋತ್ಸವ ಸಮಿತಿಯು ವಿದ್ಯಾರ್ಥಿಗಳಿಗಾಗಿ ನಡೆಸಿದ ಶ್ಲೋಕ ಕಂಠಪಾಠ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನವನ್ನು ಪೂಜ್ಯನೀಯ ಸ್ವಾಮೀಜಿಯವರು ವಿತರಿಸಿದರು.

ಶ್ರೀ ರಾಮ ಕ್ಷೇತ್ರದ ವ್ಯವಸ್ಥಾಪಕರಾದ ಧರ್ಮಣ್ಣ ಗೌಡ ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಪಿ , ಕಾರ್ಯದರ್ಶಿ ಗಣೇಶ್ ಬಜಿಲ, ಸಮಿತಿಯ ಪ್ರಮುಖರಾದ ರಾಘವ ಕುರ್ಮಣಿ, ನವೀನ್ ಕನ್ಯಾಡಿ, ವಸಂತ್ ನಾಯ್ಕ, ಪ್ರೀತಮ್ ಧರ್ಮಸ್ಥಳ , ಸುಂದರ ಗೌಡ , ನಿಶಾನ್ ನಾರ್ಯ , ಮಹಾಬಲ ನಾಯ್ಕ, ಸ್ವಸ್ತಿಕ್ ಕನ್ಯಾಡಿ , ಸುಂದರೇಶ್ , ಪುರಂದರ , ಸೃಜನ್ , ರಮೇಶ್ , ಶ್ರೀಮತಿ ಧನಲಕ್ಸ್ಮಿ ಜನಾರ್ಧನ್ , ಶ್ರೀಮತಿ ಚಂದ್ರಾವತಿ , ಶ್ರೀಮತಿ ವೇದಾವತಿ ,ಶ್ರೀಮತಿ ಸುಧಾ , ಶ್ರೀಮತಿ ಯಶೋಧ, ಶ್ರೀಮತಿ ಸುಂದರಿ , ಕು. ಯಶಸ್ವಿನಿ, ಸಂತೋಷ್ ಹಾಗೂ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು