ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 268 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ