ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ

ಬೆಂಗಳೂರು: ‘ಪಿಕೆ’ಯಂತಹ ಚಲನಚಿತ್ರ, ‘ಪಾತಾಲಲೋಕ’ನಂತಹ ವೆಬ್‌ಸೀರಿಸ್ ಮಾಧ್ಯಮಗಳಿಂದ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುವ ‘ಬಾಲಿವುಡ್’ನ ಷಡ್ಯಂತ್ರವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆಗಳು, ಪರಂಪರೆ ಇತ್ಯಾದಿಗಳನ್ನು ಅಣಕಿಸಲಾಗುತ್ತಿದೆ. ಹಿಂದೂ ಸಮಾಜ ಇದರ ಬಗ್ಗೆ ಧ್ವನಿ ಎತ್ತದ ಕಾರಣ ‘ಬಾಲಿವುಡ್’ನಲ್ಲಿ ಹಿಂದೂದ್ರೋಹಕ್ಕೆ ನೀರುಗೊಬ್ಬರ ಹಾಕಲಾಗುತ್ತಿದೆ. ಬ್ರಾಹ್ಮಣ ವ್ಯಕ್ತಿಗೆ ಕಪಟಿ ಅಥವಾ ಅತ್ಯಾಚಾರಿ ಎಂದು ತೋರಿಸುವುದು, ಭಾರತದಲ್ಲಿ ಮುಸಲ್ಮಾನರ ಮೇಲೆ ದೌರ್ಜನ್ಯವಾಗುತ್ತಿರುವಂತೆ ತೋರಿಸುವುದು, ಇವೆಲ್ಲ ಸಮಾಜದ ‘ಬ್ರೇನ್‌ವಾಶ್’ ಆಗಿದೆ. ‘ಜೈ ಶ್ರೀರಾಮ’ನ ಜಯಘೋಷವನ್ನು ಅವಮಾನಿಸುವ ಬಾಲಿವುಡ್‌ನವರು ಭಯೋತ್ಪಾದಕರ ವಿಶಿಷ್ಟ ಘೋಷಣೆಯ ಬಗ್ಗೆ ಏಕೆ ಮಾತನಾಡುವುದಿಲ್ಲ ? ‘ತ್ರಿವಳಿ ತಲಾಕ’ ಬಗ್ಗೆ ಏಕೆ ಮಾತನಾಡುವುದಿಲ್ಲ ?, ಎಂದು ಹೇಳುತ್ತಾ ಇವೆಲ್ಲ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವ ‘ಬಾಲಿವುಡ್’ನ ಪಿತೂರಿ ಆಗಿದೆ ಎಂದು ಹಿಂದಿ ಚಲನಚಿತ್ರದ ನಟಿ ಪಾಯಲ ರೊಹತಗಿ ಯವರು ಎಲ್ಲ ಬಾಲಿವುಡ್‌ನವರಿಗೆ ಜ್ವಲಂತ ಪ್ರಶ್ನೆಯನ್ನು ಕೇಳಿದ್ದಾರೆ.

ಅವರು ಜುಲೈ ೧೯ ರಂದು ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯು ಜಂಟಿಯಾಗಿ ಆಯೋಜಿಸಿದ್ದ ‘ಚರ್ಚಾ ಹಿಂದೂ ರಾಷ್ಷ್ರ ಕೀ’ ಈ ಆನ್‌ಲೈನ್ ಸಂವಾದ ಸರಣಿಯಲ್ಲಿ ‘ಹಿಂದೂವಿರೋಧಿ ‘ಬಾಲಿವುಡ್’ ಕಾ ಪರ್ದಾಫಾಶ್’ ಈ ವಿಷಯದಲ್ಲಿ ‘ವಿಶೇಷ ಸಂವಾದ’ದಲ್ಲಿ ಮಾತನಾಡುತ್ತಿದ್ದರು.

ಚರ್ಚೆಯ ಆರಂಭದಲ್ಲಿ ಚಲನಚಿತ್ರ, ಧಾರಾವಾಹಿ, ‘ವೆಬ್‌ಸೀರಿಸ್’ನ ಮಾಧ್ಯಮಗಳಿಂದ ಕ್ರಮಬದ್ಧವಾಗಿ ಹಿಂದೂ ಧರ್ಮ ಹಾಗೂ ಸಮಾಜ ಇವುಗಳನ್ನು ಹೇಗೆ ಅವಮಾನಿಸಲಾಗುತ್ತಿದೆ, ಎಂಬುದನ್ನು ಹೇಳುವ ವಿಡಿಯೋ ತೋರಿಸಲಾಯಿತು. ಈ ಆನ್‌ಲೈನ್ ಸಂವಾದವನ್ನು ಯೂ-ಟ್ಯೂಬ್ ಹಾಗೂ ಫೇಸ್‌ಬುಕ್‌ನ ಮಾಧ್ಯಮಗಳಿಂದ ೩,೮೯,೭೬೦ ಜನರ ತನಕ ತಲುಪಿದರೆ, ೧,೦೮,೪೧೧ ಜನರು ಪ್ರತ್ಯಕ್ಷವಾಗಿ ನೋಡಿದರು. ಈ ವಿಷಯದಲ್ಲಿ ಅನೇಕರು ಟ್ವಿಟ್ಟರ್#Censor_Web_Series ಈ ಹ್ಯಾಶ್‌ಟ್ಯಾಗ್‌ಅನ್ನು ಉಪಯೋಗಿಸಿ ಬೆಂಬಲಿಸಿದರು. ಕೆಲವೇ ಸಮಯದಲ್ಲಿ ಈ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿ ಮೊದಲನೇಯ ಸ್ಥಾನದಲ್ಲಿತ್ತು. ಈ ವಿಷಯ ಬಗ್ಗೆ ೧ ಲಕ್ಷಕ್ಕಿಂತಲೂ ಹೆಚ್ಚು ಟ್ವೀಟ್ಸ್ ಮಾಡಲಾಗಿದೆ.

ಈ ಸಂವಾದದಲ್ಲಿ ಸಹಭಾಗಿಯಾಗಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ ಝಾರವರು ಮಾತನಾಡುತ್ತಾ, ‘ಬಾಲಿವುಡ್’ ಇದು ಜಿಹಾದಿಗಳ ತಾಣವಾಗಿದ್ದು ಇಲ್ಲಿ ‘ಲವ್ ಜಿಹಾದ್’ಗೆ ಪೋಷಿಸಲಾಗುತ್ತಿದೆ. ಭಾರತವನ್ನು ಇಸ್ಲಾಮೀಕರಣ ಮಾಡುವ ಷಡ್ಯಂತ್ರದಲ್ಲಿ ಬಾಲಿವುಡ್‌ನ ದೊಡ್ಡ ಕೈವಾಡವಿದೆ. ಹಾಜಿ ಮಸ್ತಾನ, ದಾವುದ್ ಇಬ್ರಾಹಿಮ್‌ನಂತಹ ‘ಭೂಗತ’ದ ಗೂಂಡಾಗಳು ‘ಬಾಲಿವುಡ್’ಗೆ ನಿಧಿಯನ್ನು ನೀಡಿ ಆಯೋಜನಾಬದ್ಧವಾಗಿ ‘ಖಾನ್’ಗಳನ್ನು ಸ್ಥಾಪಿಸಿದ್ದಾರೆ. ಬಾಲಿವುಡ್‌ನ ಈ ಜಿಹಾದಿ ಅಂಗವನ್ನು ‘ಎನ್‌ಐಎ’ನಿಂದ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಹಿಂದೂವಿನ ಹನನವನ್ನು ತಡೆಗಟ್ಟುವ ಹಿಂದುತ್ವನಿಷ್ಠ ಶ್ರೀ. ರಮೇಶ ಸೋಲಂಕಿಯವರು ಮಾತನಾಡುತ್ತಾ, ‘ಬಾಲಿವುಡ್’ ಇದು ‘ಡಿ ಗ್ಯಾಂಗ್’ನ ಹಣವನ್ನು ಬಿಳಿ ಹಣವನ್ನಾಗಿ ಮಾಡುವ ಮಾಧ್ಯಮವಾಗಿದೆ. ವಿನೋದ ಅಥವಾ ಮನೋರಂಜನೆಗಾಗಿ ಹಾಸ್ಯವನ್ನು ಮಾಡದೇ ಹಿಂದೂ ಧರ್ಮ ಹಾಗೂ ಪರಂಪರೆಗಳ ಬಗ್ಗೆ ಅಪಹಾಸ್ಯ ಮಾಡಲಾಗುತ್ತಿದೆ. ಇದರ ವಿರುದ್ಧ ಹಿಂದೂಗಳು ಸಂಘಟಿತರಾಗಿ ಹೋರಾಡಬೇಕಿದೆ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಮಾತನಾಡುತ್ತಾ, ಮುಂಬಯಿಯಲ್ಲಿ ೨೦೧೨ ರಲ್ಲಿ ಗಲಭೆಯನ್ನು ಮಾಡಿದ್ದ ರಝಾ ಅಕಾಡಮಿಯವರ ಬೇಡಿಕೆಯನುಸಾರ ‘ಮಹಮ್ಮದ್ : ದ ಮೆಸೆಂಜರ ಆಫ್ ಗಾಡ್’ ಈ ಚಲನಚಿತ್ರದ ಮೇಲೆ ನಿರ್ಬಂಧ ಹೇರಲು ಮಹಾರಾಷ್ಟ್ರ ಸರಕಾರ ಕೂಡಲೇ ಶಿಫಾರಸ್ಸನ್ನು ಮಾಡಿತು; ಆದರೆ ಹಿಂದೂ ಧರ್ಮದ ಮೇಲೆ ಆಘಾತ ಮಾಡುವ ಚಲನಚಿತ್ರಗಳ ಬಗ್ಗೆ ಹಿಂದೂಗಳು ಎಷ್ಟೇ ವಿರೋಧಿಸಿದರು ಸರಕಾರದಿಂದ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಕಾನೂನಿನ ಬಂಧನ ಇಲ್ಲದ್ದರಿಂದ ‘ಓಟಿಟಿ’ ಪ್ಲಾಟ್‌ಫಾರ್ಮ್ಸ್ ನಿಂದ ಅತ್ಯಂತ ಅಕ್ಷೇಪಾರ್ಹ, ಹಿಂದೂವಿರೋಧಿ, ದೇಶವಿರೋಧಿ ಹಾಗೂ ಸೈನ್ಯವಿರೋಧಿ ‘ವೆಬ್‌ಸೀರಿಸ್’ಗಳ ಪ್ರಸಾರವಗುತ್ತಿದೆ. ‘ಕೋರ್ಟ್ ಮಾರ್ಶಲ್’, ‘ಕೋಡ್ ಎಮ್’ ನಂತಹ ವೆಬ್‌ಸೀರಿಸ್‌ಗಳಲ್ಲಿ ಭಾರತೀಯ ಸೈನಿಕರು ಸಲಿಂಗಿಗಳೆಂದು ತೋರಿಸಲಾಗಿದೆ. ಆದರೆ ಸರಕಾರ ಮಾತ್ರ ಇಂತಹ ‘ವೆಬ್‌ಸೀರಿಸ್’ ಹಾಗೂ ‘ಓಟಿಟಿ ಪ್ಲಾಟ್‌ಫಾರ್ಮ್ಸ್’ಗಳನ್ನು ಕೇಂದ್ರಿಯ ಚಲನಚಿತ್ರ ಪರೀಕ್ಷಣಾ ಮಂಡಳಿಯ ನಿಯಂತ್ರಣಕ್ಕೆ ತರಬೇಕು ಎಂದು ಹೇಳಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ