ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಾಧು ಕಾಂತಿ ಪ್ರಸಾದ ಇವರು ಕೇಸರಿ ವಸ್ತ್ರವನ್ನು ಹಾಕಿಕೊಂಡಿದ್ದರೆಂದು ಅನಸ ಕುರೈಶಿ ನಿಂದಿಸಿದನು ಹಾಗೂ ಇದನ್ನು ವಿರೋಧಿಸಿದ್ದರಿಂದ ಮತಾಂಧನು ಹಿಗ್ಗಾಮುಗ್ಗಾ ಥಳಿಸುತ್ತಾ ಆ ಸಾಧುವಿನ ಹತ್ಯೆ ಮಾಡಿದನು. ಇದರಿಂದ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಕೇಸರಿ ವಸ್ತ್ರ ಹಾಕುವವರನ್ನು ಗುರಿಯಾಗಿಸುತ್ತಿದ್ದಾರೆ, ಎಂಬುದು ಗಮನಕ್ಕೆ ಬರುತ್ತದೆ. ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ, ಅನಸ ಕುರೈಶಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇದೆಯೋ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

ಮೊದಲಿಗೆ ಪಾಲ್ಘರ್, ಬುಲಂದಶಹರ್, ನಾಂದೇಡ್ ಮತ್ತು ಈಗ ಮೀರತ್‌ನಲ್ಲಿ ಸನ್ಯಾಸಿಗಳ ಹತ್ಯಾ ಸರಣಿ ನಡೆಯುತ್ತಲೇ ಇದೆ. ಈ ಘಟನೆಗಳಿಂದ ಹಿಂದೂ ಸಮಾಜದಲ್ಲಿ ಆಕ್ರೋಶದ ಭಾವನೆ ಇದೆ. ಒಂದುವೇಳೆ ಈ ಘಟನೆ ಮುಸಲ್ಮಾನರ ಅಥವಾ ಇನ್ನೊಂದು ಸಮುದಾಯದ ವ್ಯಕ್ತಿಯ ವಿಷಯದಲ್ಲಿ ಸಂಭವಿಸಿದ್ದರೆ, ಜಾತ್ಯತೀತವಾದಿಗಳು ‘ಮಾಬ್ ಲಿಂಚಿಂಗ್’ ಹೇಳುತ್ತಾ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡಿ ಹಿಂದುತ್ವವನ್ನು ದೂಷಿಸುತ್ತಿದ್ದರು; ಆದರೆ ಮೃತಪಟ್ಟವರು ಹಿಂದೂ ಸಾಧು ಮತ್ತು ಹಂತಕ ಮುಸಲ್ಮಾನನಾಗಿದ್ದಾನೆ. ಆದ್ದರಿಂದ ಯಾವುದೇ ಪ್ರಗತಿಪರ ನಾಯಕನು ಖಂಡಿಸಿಲ್ಲ. ಇದು ಭಾರತದಲ್ಲಿ ಜಾತ್ಯತೀತತೆಯ ಸೋಲಾಗಿದೆ. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಸಾಧುಗಳ ಹತ್ಯೆಯ ಮೂಲವನ್ನು ಪತ್ತೆ ಹಚ್ಚಿ ಹಿಂದೂಗಳಿಗೆ ನ್ಯಾಯ ನೀಡುತ್ತಾರೆ ಎಂದು ನಾವು ಆಶಿಸುತ್ತೇವೆ ಎಂದೂ ಶ್ರೀ. ಶಿಂದೆಯವರು ಪ್ರಕಟಣೆಯಲ್ಲಿ ಹೇಳಿಕೆ ನಿಡಿದ್ದಾರೆ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ