‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

ಮಂಗಳೂರು: ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸಬೇಕು ! : ಅನಿಲ ಧೀರ್, ರಾಷ್ಟ್ರೀಯ ಕಾರ್ಯದರ್ಶಿ, ಭಾರತ ರಕ್ಷಾ ಮಂಚ, ಒಡಿಶಾ

ಅಭಿವೃದ್ಧಿಯ ಹೆಸರಿನಲ್ಲಿ ಒಡಿಶಾದಲ್ಲಿ ಅನೇಕ ಮಠಗಳನ್ನು ಅಲ್ಲಿಯ ಸರಕಾರ ನಾಶ ಮಾಡಿದೆ, ಇದರಿಂದ ಅನೇಕ ದೇವಸ್ಥಾನಗಳು ಹಾಗೂ ಪ್ರಾಚೀನ ಗ್ರಂಥಗಳ ಸಂಪತ್ತು ನಾಶವಾಗಿದೆ. ಅನೇಕ ಪ್ರಾಚೀನ ಮೂರ್ತಿಗಳನ್ನೂ ಕದಿಯಲಾಗಿದೆ. ಸ್ಥಳೀಯ ಹಿಂದೂಗಳು ಇದರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು; ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು. ಮಠ-ದೇವಸ್ಥಾನಗಳನ್ನು ಧ್ವಂಸಗೊಳಿಸಿರುವುದರಿಂದ ಹಿಂದೂಗಳ ಸಾಂಸ್ಕೃತಿಕ ಭಂಡಾರ ನಾಶವಾಗುತ್ತಿದೆ. ಅದರ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸುವುದು ಅಗತ್ಯವಿದೆ ಎಂದು ಒಡಿಶಾದ ‘ಭಾರತ ರಕ್ಷಾ ಮಂಚ’ನ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ. ಅನಿಲ ಧೀರ ಇವರು ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯು ಆಯೋಜಿಸಿದ್ದ ಆನ್‌ಲೈನ್ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಹೇಳಿದರು.

ಈ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್ ಚಾನಲ್’ ಹಾಗೂ ‘ಹಿಂದೂ ಅಧಿವೇಶನ’ ಈ ಫೇಸ್‌ಬುಕ್ ಪೇಜ್ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 54 ಸಾವಿರಕ್ಕೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷಕ್ಕೂ ಹೆಚ್ಚು ಜನರ ತನಕ ವಿಷಯ ತಲುಪಿದೆ.


ತೆಲಂಗಾಣದ ಶಿವಸೇನೆಯ ರಾಜ್ಯಾಧ್ಯಕ್ಷ ಶ್ರೀ. ಟಿ.ಎನ್. ಮುರಾರಿ ಇವರು ಮಾತನಾಡುತ್ತಾ, ಸಾಂಸ್ಕೃತಿಕ ಭಂಡಾರವಾಗಿರುವ ದೇವಸ್ಥಾನವನ್ನು ರಕ್ಷಿಸಿದರೆ, ಧರ್ಮದ ರಕ್ಷಣೆಯಾಗುವುದು. ಆದ್ದರಿಂದ ದೇವಸ್ಥಾನ ರಕ್ಷಣೆಗಾಗಿ ಮೋದಿ ಸರಕಾರವು ಒಂದು ಧಾರ್ಮಿಕ ಪರಿಷತ್ತನ್ನು ಸ್ಥಾಪಿಸಬೇಕು ಎಂದು ಹೇಳಿದರು.

‘ಇಟರ್ನಲ್ ಹಿಂದೂ ಫೌಂಡೇಶನ’ನ ಶ್ರೀ. ಸಂಜಯ ಶರ್ಮಾ ಇವರು ಮಾತನಾಡುತ್ತಾ, ದೇವಸ್ಥಾನವು ಸಾಮಾಜಿಕ ಜಾಗೃತಿಯ ಕೇಂದ್ರವಾಗಬೇಕು. ದೇವಸ್ಥಾನದಿಂದ ‘ಸಿ.ಎ.ಎ’, ಎನ್.ಆರ್.ಸಿ.’ ಇತ್ಯಾದಿ ಕಾಯ್ದೆ ಹಾಗೂ ಧರ್ಮದ ಬಗ್ಗೆ ಜಾಗೃತಿಯಾದಲ್ಲಿ ಸ್ವದೇಶಿಯ ಘೋಷಣೆಗೆ ಬಲ ಸಿಗುವುದು. ಇದರಿಂದ ಪ್ರಧಾನಿ ಮೋದಿಯವರ ‘ಆತ್ಮನಿರ್ಭರ ಭಾರತ’ದ ಘೋಷಣೆಯ ದಿಕ್ಕಿನತ್ತ ಹೊರಳಬಹುದು ಎಂದು ಹೇಳಿದರು.

ರಾಜಸ್ಥಾನದ ವಾನರ ಸೇನೆಯ ಅಧ್ಯಕ್ಷ ಶ್ರೀ. ಗಜೇಂದ್ರ ಭಾರ್ಗವ ಈ ಸಮಯದಲ್ಲಿ ಮಾತನಾಡುತ್ತಾ, ದೇವಸ್ಥಾನದ ಆಂತರಿಕ ವ್ಯವಸ್ಥೆಯೊಂದಿಗೆ ಬಾಹ್ಯ ವ್ಯವಸ್ಥೆಯೂ ಅಷ್ಟೇ ಮಹತ್ವದ್ದಾಗಿದೆ. ಹೆಚ್ಚಿನ ದೇವಸ್ಥಾನಗಳ ಸ್ಥಳ ಹಾಗೂ ಅಲ್ಲಿಯ ಅಂಗಡಿಗಳು ಆಕ್ರಮಣಕಾರರ ಬೀಡಾಗಿದೆ. ಇದರ ಬಗ್ಗೆ ಹಿಂದೂಗಳು ಚಿಂತನೆ ಮಾಡಬೇಕು. ಹಿಂದೂ ಯುವಕರಿಗೆ ನಮ್ಮ ಸಂಸ್ಕೃತಿಯ ಮಹತ್ವದ ಬಗ್ಗೆ ತಿಳಿಸಿದರೆ ಅವರು ದೇವಸ್ಥಾನದ ರಕ್ಷಣೆಗಾಗಿ ಸಂಘಟಿತರಾಗುವರು ಎಂದು ಹೇಳಿದರು.


ದೇವಸ್ಥಾನಗಳ ಮೇಲಾಗುವ ವಿವಿಧ ಆಘಾತಗಳ ಬಗ್ಗೆ ‘ದೇವಸ್ಥಾನ ರಕ್ಷಣೆ’ ವಿಚಾರ ಸಂಕಿರಣದಲ್ಲಿ ಗಣ್ಯರ ಸಹಭಾಗ !
ತಮಿಳುನಾಡಿನ ‘ಟೆಂಪಲ್ ವರ್ಶಿಪರ್ಸ್ ಸೋಸೈಟಿ’ಯ ಉಪಾಧ್ಯಕ್ಷೆ ಶ್ರೀಮತಿ ಉಮಾ ಆನಂದನ್ ಇವರು ಈ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ, ಚರ್ಚ್ ಮತ್ತು ಮಸೀದಿಗಳಿಗಾಗಿ ಜಗತ್ತಿನಾದ್ಯಂತ ಎಲ್ಲ ಸ್ಥಳಗಳ ನಿಯಮಗಳು ಒಂದೇ ರೀತಿ ಇದೆ; ಆದರೆ ದೇವಸ್ಥಾನಗಳಿಗೆ ಮಾತ್ರ ಬೇರೆ ನಿಯಮಗಳಿವೆ. ಯಾವ ರೀತಿ ಚರ್ಚ್‌ನ ಫಾದರ್ ಹಾಗೂ ಮಸೀದಿಯ ಮೌಲ್ವಿಗಳು ಪ್ರಾರ್ಥನಾಸ್ಥಳಗಳ ವ್ಯವಸ್ಥಾಪನೆಯನ್ನು ನೋಡಿಕೊಳ್ಳುತ್ತಾರೆ, ಅದರಂತೆ ದೇವಸ್ಥಾನದ ವ್ಯವಸ್ಥಾಪನೆ ಭಕ್ತರಿಗೆ ನೀಡಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಆಂಧ್ರಪ್ರದೇಶದ ಇತಿಹಾಸಕಾರರಾದ ಶ್ರೀ. ಬಿ.ಕೆ.ಎಸ್.ಆರ್. ಅಯ್ಯಂಗಾರ ಇವರು ಮಾತನಾಡುತ್ತಾ, 100 ವರ್ಷಗಳ ಇತಿಹಾಸವಿರುವ ಮಠ, ದೇವಸ್ಥಾನದೊಂದಿಗೆ ಇತರ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳನ್ನು ‘ಸಾಂಸ್ಕೃತಿಕ ಬೀಡು’ ಎಂದು ಘೋಷಿಸಬೇಕು. ಅದೇ ರೀತಿ ಪ್ರಾಚೀನ ದೇವಸ್ಥಾನಗಳ ಪುನರ್‌ನಿರ್ಮಾಣ ಮಾಡುವಾಗ ಧಾರ್ಮಿಕ ಕ್ಷೇತ್ರದ ಗಣ್ಯರ/ಹಿರಿಯರ ಮಾರ್ಗದರ್ಶನವನ್ನು ಪಡೆಯಬೇಕು ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಹಾಗೂ ಛತ್ತೀಸಗಡ ರಾಜ್ಯ ಸಂಘಟಕರಾದ ಶ್ರೀ. ಸುನಿಲ ಘನವಟ ಇವರು ಮಾತನಾಡುತ್ತಾ, ದೇವಸ್ಥಾನ ಸಮಿತಿಯಲ್ಲಿ ಆಗುವಂತಹ ಭ್ರಷ್ಟಾಚಾರ, ಇದು ದೇವಸ್ಥಾನ ಸರಕಾರಿಕರಣದ ದುಷ್ಪರಿಣಾಮವಾಗಿದೆ. ಇದನ್ನು ತಡೆಯಲು ದೇವಸ್ಥಾನದ ವಿಶ್ವಸ್ಥರು ಹಾಗೂ ಹಿಂದುತ್ವನಿಷ್ಠರು ಮುಂದೆ ಬಂದು ರಾಷ್ಟ್ರೀಯ ಸ್ತರದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳುವುದು ಅಗತ್ಯವಿದೆ.

ಈ ಸಮಯದಲ್ಲಿ ಶ್ರೀ. ಘನವಟ ಇವರು ಮಾತನಾಡುತ್ತಾ ‘ರಾಮಮಂದಿರದಂತೆ ಕಾಶಿ, ಮಥುರಾದೊಂದಿಗೆ ದೇಶದಾದ್ಯಂತ 40 ಸಾವಿರ ದೇವಸ್ಥಾನಗಳನ್ನು ಮುಕ್ತಗೊಳಿಸಲು ಹಿಂದೂಗಳು ‘ರಾಷ್ಟ್ರೀಯ ದೇವಸ್ಥಾನ-ಸಂಸ್ಕೃತಿ ರಕ್ಷಾ ಅಭಿಯಾನ’ದಲ್ಲಿ ಸಹಭಾಗಿಯಾಗಬೇಕು ಎಂದು ಕರೆ ನೀಡಿದರು.

ಈ ಸಮಯದಲ್ಲಿ ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಷ್ರೀಯ ಅಧ್ಯಕ್ಷ ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ ಇವರು ಮಾತನಾಡುತ್ತಾ, ಜಾತ್ಯತೀತವೆಂದು ಹೇಳುವ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಕ್ಕೆ ಪಡೆಯುತ್ತದೆ; ಆದರೆ ಮಸೀದಿ ಅಥವಾ ಚರ್ಚ್ ವಶಕ್ಕೆ ಪಡೆಯುವುದಿಲ್ಲ. ದೇವಸ್ಥಾನಗಳ ಹಣವನ್ನು ಇತರ ಧರ್ಮದವರಿಗಾಗಿ ಖರ್ಚು ಮಾಡಲಾಗುತ್ತದೆ. ಸರಕಾರದ ಮಲತಾಯಿ ಧೋರಣೆ ವಿರುದ್ಧ ಹಿಂದೂಗಳು ಒತ್ತಡ ನಿರ್ಮಿಸಬೇಕು ಎಂದು ಹೇಳಿದರು.

Spread the love
  • Related Posts

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

    Spread the love

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಗೌಡ ಸಂಘದ ವತಿಯಿಂದ 2026ನೇ ಸಾಲಿನ “ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ”ವನ್ನು ಫೆಬ್ರವರಿ 22ರಂದು ಭಾನುವಾರ ಬೆಳಿಗ್ಗೆ 8.30 ಗಂಟೆಯಿಂದ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಕಾಲಭೈರವ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ಸಮುದಾಯದ…

    Spread the love

    You Missed

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 63 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 143 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 62 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 32 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    • By admin
    • February 20, 2026
    • 44 views
    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

    • By admin
    • February 18, 2026
    • 506 views
    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್  ಪೋಲೀಸ್ ವಶಕ್ಕೆ