‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

ಮಂಗಳೂರು: ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸಬೇಕು ! : ಅನಿಲ ಧೀರ್, ರಾಷ್ಟ್ರೀಯ ಕಾರ್ಯದರ್ಶಿ, ಭಾರತ ರಕ್ಷಾ ಮಂಚ, ಒಡಿಶಾ

ಅಭಿವೃದ್ಧಿಯ ಹೆಸರಿನಲ್ಲಿ ಒಡಿಶಾದಲ್ಲಿ ಅನೇಕ ಮಠಗಳನ್ನು ಅಲ್ಲಿಯ ಸರಕಾರ ನಾಶ ಮಾಡಿದೆ, ಇದರಿಂದ ಅನೇಕ ದೇವಸ್ಥಾನಗಳು ಹಾಗೂ ಪ್ರಾಚೀನ ಗ್ರಂಥಗಳ ಸಂಪತ್ತು ನಾಶವಾಗಿದೆ. ಅನೇಕ ಪ್ರಾಚೀನ ಮೂರ್ತಿಗಳನ್ನೂ ಕದಿಯಲಾಗಿದೆ. ಸ್ಥಳೀಯ ಹಿಂದೂಗಳು ಇದರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು; ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು. ಮಠ-ದೇವಸ್ಥಾನಗಳನ್ನು ಧ್ವಂಸಗೊಳಿಸಿರುವುದರಿಂದ ಹಿಂದೂಗಳ ಸಾಂಸ್ಕೃತಿಕ ಭಂಡಾರ ನಾಶವಾಗುತ್ತಿದೆ. ಅದರ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸುವುದು ಅಗತ್ಯವಿದೆ ಎಂದು ಒಡಿಶಾದ ‘ಭಾರತ ರಕ್ಷಾ ಮಂಚ’ನ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ. ಅನಿಲ ಧೀರ ಇವರು ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯು ಆಯೋಜಿಸಿದ್ದ ಆನ್‌ಲೈನ್ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಹೇಳಿದರು.

ಈ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್ ಚಾನಲ್’ ಹಾಗೂ ‘ಹಿಂದೂ ಅಧಿವೇಶನ’ ಈ ಫೇಸ್‌ಬುಕ್ ಪೇಜ್ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 54 ಸಾವಿರಕ್ಕೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷಕ್ಕೂ ಹೆಚ್ಚು ಜನರ ತನಕ ವಿಷಯ ತಲುಪಿದೆ.


ತೆಲಂಗಾಣದ ಶಿವಸೇನೆಯ ರಾಜ್ಯಾಧ್ಯಕ್ಷ ಶ್ರೀ. ಟಿ.ಎನ್. ಮುರಾರಿ ಇವರು ಮಾತನಾಡುತ್ತಾ, ಸಾಂಸ್ಕೃತಿಕ ಭಂಡಾರವಾಗಿರುವ ದೇವಸ್ಥಾನವನ್ನು ರಕ್ಷಿಸಿದರೆ, ಧರ್ಮದ ರಕ್ಷಣೆಯಾಗುವುದು. ಆದ್ದರಿಂದ ದೇವಸ್ಥಾನ ರಕ್ಷಣೆಗಾಗಿ ಮೋದಿ ಸರಕಾರವು ಒಂದು ಧಾರ್ಮಿಕ ಪರಿಷತ್ತನ್ನು ಸ್ಥಾಪಿಸಬೇಕು ಎಂದು ಹೇಳಿದರು.

‘ಇಟರ್ನಲ್ ಹಿಂದೂ ಫೌಂಡೇಶನ’ನ ಶ್ರೀ. ಸಂಜಯ ಶರ್ಮಾ ಇವರು ಮಾತನಾಡುತ್ತಾ, ದೇವಸ್ಥಾನವು ಸಾಮಾಜಿಕ ಜಾಗೃತಿಯ ಕೇಂದ್ರವಾಗಬೇಕು. ದೇವಸ್ಥಾನದಿಂದ ‘ಸಿ.ಎ.ಎ’, ಎನ್.ಆರ್.ಸಿ.’ ಇತ್ಯಾದಿ ಕಾಯ್ದೆ ಹಾಗೂ ಧರ್ಮದ ಬಗ್ಗೆ ಜಾಗೃತಿಯಾದಲ್ಲಿ ಸ್ವದೇಶಿಯ ಘೋಷಣೆಗೆ ಬಲ ಸಿಗುವುದು. ಇದರಿಂದ ಪ್ರಧಾನಿ ಮೋದಿಯವರ ‘ಆತ್ಮನಿರ್ಭರ ಭಾರತ’ದ ಘೋಷಣೆಯ ದಿಕ್ಕಿನತ್ತ ಹೊರಳಬಹುದು ಎಂದು ಹೇಳಿದರು.

ರಾಜಸ್ಥಾನದ ವಾನರ ಸೇನೆಯ ಅಧ್ಯಕ್ಷ ಶ್ರೀ. ಗಜೇಂದ್ರ ಭಾರ್ಗವ ಈ ಸಮಯದಲ್ಲಿ ಮಾತನಾಡುತ್ತಾ, ದೇವಸ್ಥಾನದ ಆಂತರಿಕ ವ್ಯವಸ್ಥೆಯೊಂದಿಗೆ ಬಾಹ್ಯ ವ್ಯವಸ್ಥೆಯೂ ಅಷ್ಟೇ ಮಹತ್ವದ್ದಾಗಿದೆ. ಹೆಚ್ಚಿನ ದೇವಸ್ಥಾನಗಳ ಸ್ಥಳ ಹಾಗೂ ಅಲ್ಲಿಯ ಅಂಗಡಿಗಳು ಆಕ್ರಮಣಕಾರರ ಬೀಡಾಗಿದೆ. ಇದರ ಬಗ್ಗೆ ಹಿಂದೂಗಳು ಚಿಂತನೆ ಮಾಡಬೇಕು. ಹಿಂದೂ ಯುವಕರಿಗೆ ನಮ್ಮ ಸಂಸ್ಕೃತಿಯ ಮಹತ್ವದ ಬಗ್ಗೆ ತಿಳಿಸಿದರೆ ಅವರು ದೇವಸ್ಥಾನದ ರಕ್ಷಣೆಗಾಗಿ ಸಂಘಟಿತರಾಗುವರು ಎಂದು ಹೇಳಿದರು.


ದೇವಸ್ಥಾನಗಳ ಮೇಲಾಗುವ ವಿವಿಧ ಆಘಾತಗಳ ಬಗ್ಗೆ ‘ದೇವಸ್ಥಾನ ರಕ್ಷಣೆ’ ವಿಚಾರ ಸಂಕಿರಣದಲ್ಲಿ ಗಣ್ಯರ ಸಹಭಾಗ !
ತಮಿಳುನಾಡಿನ ‘ಟೆಂಪಲ್ ವರ್ಶಿಪರ್ಸ್ ಸೋಸೈಟಿ’ಯ ಉಪಾಧ್ಯಕ್ಷೆ ಶ್ರೀಮತಿ ಉಮಾ ಆನಂದನ್ ಇವರು ಈ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ, ಚರ್ಚ್ ಮತ್ತು ಮಸೀದಿಗಳಿಗಾಗಿ ಜಗತ್ತಿನಾದ್ಯಂತ ಎಲ್ಲ ಸ್ಥಳಗಳ ನಿಯಮಗಳು ಒಂದೇ ರೀತಿ ಇದೆ; ಆದರೆ ದೇವಸ್ಥಾನಗಳಿಗೆ ಮಾತ್ರ ಬೇರೆ ನಿಯಮಗಳಿವೆ. ಯಾವ ರೀತಿ ಚರ್ಚ್‌ನ ಫಾದರ್ ಹಾಗೂ ಮಸೀದಿಯ ಮೌಲ್ವಿಗಳು ಪ್ರಾರ್ಥನಾಸ್ಥಳಗಳ ವ್ಯವಸ್ಥಾಪನೆಯನ್ನು ನೋಡಿಕೊಳ್ಳುತ್ತಾರೆ, ಅದರಂತೆ ದೇವಸ್ಥಾನದ ವ್ಯವಸ್ಥಾಪನೆ ಭಕ್ತರಿಗೆ ನೀಡಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಆಂಧ್ರಪ್ರದೇಶದ ಇತಿಹಾಸಕಾರರಾದ ಶ್ರೀ. ಬಿ.ಕೆ.ಎಸ್.ಆರ್. ಅಯ್ಯಂಗಾರ ಇವರು ಮಾತನಾಡುತ್ತಾ, 100 ವರ್ಷಗಳ ಇತಿಹಾಸವಿರುವ ಮಠ, ದೇವಸ್ಥಾನದೊಂದಿಗೆ ಇತರ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳನ್ನು ‘ಸಾಂಸ್ಕೃತಿಕ ಬೀಡು’ ಎಂದು ಘೋಷಿಸಬೇಕು. ಅದೇ ರೀತಿ ಪ್ರಾಚೀನ ದೇವಸ್ಥಾನಗಳ ಪುನರ್‌ನಿರ್ಮಾಣ ಮಾಡುವಾಗ ಧಾರ್ಮಿಕ ಕ್ಷೇತ್ರದ ಗಣ್ಯರ/ಹಿರಿಯರ ಮಾರ್ಗದರ್ಶನವನ್ನು ಪಡೆಯಬೇಕು ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಹಾಗೂ ಛತ್ತೀಸಗಡ ರಾಜ್ಯ ಸಂಘಟಕರಾದ ಶ್ರೀ. ಸುನಿಲ ಘನವಟ ಇವರು ಮಾತನಾಡುತ್ತಾ, ದೇವಸ್ಥಾನ ಸಮಿತಿಯಲ್ಲಿ ಆಗುವಂತಹ ಭ್ರಷ್ಟಾಚಾರ, ಇದು ದೇವಸ್ಥಾನ ಸರಕಾರಿಕರಣದ ದುಷ್ಪರಿಣಾಮವಾಗಿದೆ. ಇದನ್ನು ತಡೆಯಲು ದೇವಸ್ಥಾನದ ವಿಶ್ವಸ್ಥರು ಹಾಗೂ ಹಿಂದುತ್ವನಿಷ್ಠರು ಮುಂದೆ ಬಂದು ರಾಷ್ಟ್ರೀಯ ಸ್ತರದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳುವುದು ಅಗತ್ಯವಿದೆ.

ಈ ಸಮಯದಲ್ಲಿ ಶ್ರೀ. ಘನವಟ ಇವರು ಮಾತನಾಡುತ್ತಾ ‘ರಾಮಮಂದಿರದಂತೆ ಕಾಶಿ, ಮಥುರಾದೊಂದಿಗೆ ದೇಶದಾದ್ಯಂತ 40 ಸಾವಿರ ದೇವಸ್ಥಾನಗಳನ್ನು ಮುಕ್ತಗೊಳಿಸಲು ಹಿಂದೂಗಳು ‘ರಾಷ್ಟ್ರೀಯ ದೇವಸ್ಥಾನ-ಸಂಸ್ಕೃತಿ ರಕ್ಷಾ ಅಭಿಯಾನ’ದಲ್ಲಿ ಸಹಭಾಗಿಯಾಗಬೇಕು ಎಂದು ಕರೆ ನೀಡಿದರು.

ಈ ಸಮಯದಲ್ಲಿ ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಷ್ರೀಯ ಅಧ್ಯಕ್ಷ ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ ಇವರು ಮಾತನಾಡುತ್ತಾ, ಜಾತ್ಯತೀತವೆಂದು ಹೇಳುವ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಕ್ಕೆ ಪಡೆಯುತ್ತದೆ; ಆದರೆ ಮಸೀದಿ ಅಥವಾ ಚರ್ಚ್ ವಶಕ್ಕೆ ಪಡೆಯುವುದಿಲ್ಲ. ದೇವಸ್ಥಾನಗಳ ಹಣವನ್ನು ಇತರ ಧರ್ಮದವರಿಗಾಗಿ ಖರ್ಚು ಮಾಡಲಾಗುತ್ತದೆ. ಸರಕಾರದ ಮಲತಾಯಿ ಧೋರಣೆ ವಿರುದ್ಧ ಹಿಂದೂಗಳು ಒತ್ತಡ ನಿರ್ಮಿಸಬೇಕು ಎಂದು ಹೇಳಿದರು.

Spread the love
  • Related Posts

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ…

    Spread the love

    You Missed

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 13 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 105 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 34 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 122 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 35 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 33 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ