‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

ಮಂಗಳೂರು: ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸಬೇಕು ! : ಅನಿಲ ಧೀರ್, ರಾಷ್ಟ್ರೀಯ ಕಾರ್ಯದರ್ಶಿ, ಭಾರತ ರಕ್ಷಾ ಮಂಚ, ಒಡಿಶಾ

ಅಭಿವೃದ್ಧಿಯ ಹೆಸರಿನಲ್ಲಿ ಒಡಿಶಾದಲ್ಲಿ ಅನೇಕ ಮಠಗಳನ್ನು ಅಲ್ಲಿಯ ಸರಕಾರ ನಾಶ ಮಾಡಿದೆ, ಇದರಿಂದ ಅನೇಕ ದೇವಸ್ಥಾನಗಳು ಹಾಗೂ ಪ್ರಾಚೀನ ಗ್ರಂಥಗಳ ಸಂಪತ್ತು ನಾಶವಾಗಿದೆ. ಅನೇಕ ಪ್ರಾಚೀನ ಮೂರ್ತಿಗಳನ್ನೂ ಕದಿಯಲಾಗಿದೆ. ಸ್ಥಳೀಯ ಹಿಂದೂಗಳು ಇದರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು; ಆದರೆ ನ್ಯಾಯಾಲಯವು ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು. ಮಠ-ದೇವಸ್ಥಾನಗಳನ್ನು ಧ್ವಂಸಗೊಳಿಸಿರುವುದರಿಂದ ಹಿಂದೂಗಳ ಸಾಂಸ್ಕೃತಿಕ ಭಂಡಾರ ನಾಶವಾಗುತ್ತಿದೆ. ಅದರ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸುವುದು ಅಗತ್ಯವಿದೆ ಎಂದು ಒಡಿಶಾದ ‘ಭಾರತ ರಕ್ಷಾ ಮಂಚ’ನ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ. ಅನಿಲ ಧೀರ ಇವರು ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯು ಆಯೋಜಿಸಿದ್ದ ಆನ್‌ಲೈನ್ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಹೇಳಿದರು.

ಈ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್ ಚಾನಲ್’ ಹಾಗೂ ‘ಹಿಂದೂ ಅಧಿವೇಶನ’ ಈ ಫೇಸ್‌ಬುಕ್ ಪೇಜ್ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 54 ಸಾವಿರಕ್ಕೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷಕ್ಕೂ ಹೆಚ್ಚು ಜನರ ತನಕ ವಿಷಯ ತಲುಪಿದೆ.


ತೆಲಂಗಾಣದ ಶಿವಸೇನೆಯ ರಾಜ್ಯಾಧ್ಯಕ್ಷ ಶ್ರೀ. ಟಿ.ಎನ್. ಮುರಾರಿ ಇವರು ಮಾತನಾಡುತ್ತಾ, ಸಾಂಸ್ಕೃತಿಕ ಭಂಡಾರವಾಗಿರುವ ದೇವಸ್ಥಾನವನ್ನು ರಕ್ಷಿಸಿದರೆ, ಧರ್ಮದ ರಕ್ಷಣೆಯಾಗುವುದು. ಆದ್ದರಿಂದ ದೇವಸ್ಥಾನ ರಕ್ಷಣೆಗಾಗಿ ಮೋದಿ ಸರಕಾರವು ಒಂದು ಧಾರ್ಮಿಕ ಪರಿಷತ್ತನ್ನು ಸ್ಥಾಪಿಸಬೇಕು ಎಂದು ಹೇಳಿದರು.

‘ಇಟರ್ನಲ್ ಹಿಂದೂ ಫೌಂಡೇಶನ’ನ ಶ್ರೀ. ಸಂಜಯ ಶರ್ಮಾ ಇವರು ಮಾತನಾಡುತ್ತಾ, ದೇವಸ್ಥಾನವು ಸಾಮಾಜಿಕ ಜಾಗೃತಿಯ ಕೇಂದ್ರವಾಗಬೇಕು. ದೇವಸ್ಥಾನದಿಂದ ‘ಸಿ.ಎ.ಎ’, ಎನ್.ಆರ್.ಸಿ.’ ಇತ್ಯಾದಿ ಕಾಯ್ದೆ ಹಾಗೂ ಧರ್ಮದ ಬಗ್ಗೆ ಜಾಗೃತಿಯಾದಲ್ಲಿ ಸ್ವದೇಶಿಯ ಘೋಷಣೆಗೆ ಬಲ ಸಿಗುವುದು. ಇದರಿಂದ ಪ್ರಧಾನಿ ಮೋದಿಯವರ ‘ಆತ್ಮನಿರ್ಭರ ಭಾರತ’ದ ಘೋಷಣೆಯ ದಿಕ್ಕಿನತ್ತ ಹೊರಳಬಹುದು ಎಂದು ಹೇಳಿದರು.

ರಾಜಸ್ಥಾನದ ವಾನರ ಸೇನೆಯ ಅಧ್ಯಕ್ಷ ಶ್ರೀ. ಗಜೇಂದ್ರ ಭಾರ್ಗವ ಈ ಸಮಯದಲ್ಲಿ ಮಾತನಾಡುತ್ತಾ, ದೇವಸ್ಥಾನದ ಆಂತರಿಕ ವ್ಯವಸ್ಥೆಯೊಂದಿಗೆ ಬಾಹ್ಯ ವ್ಯವಸ್ಥೆಯೂ ಅಷ್ಟೇ ಮಹತ್ವದ್ದಾಗಿದೆ. ಹೆಚ್ಚಿನ ದೇವಸ್ಥಾನಗಳ ಸ್ಥಳ ಹಾಗೂ ಅಲ್ಲಿಯ ಅಂಗಡಿಗಳು ಆಕ್ರಮಣಕಾರರ ಬೀಡಾಗಿದೆ. ಇದರ ಬಗ್ಗೆ ಹಿಂದೂಗಳು ಚಿಂತನೆ ಮಾಡಬೇಕು. ಹಿಂದೂ ಯುವಕರಿಗೆ ನಮ್ಮ ಸಂಸ್ಕೃತಿಯ ಮಹತ್ವದ ಬಗ್ಗೆ ತಿಳಿಸಿದರೆ ಅವರು ದೇವಸ್ಥಾನದ ರಕ್ಷಣೆಗಾಗಿ ಸಂಘಟಿತರಾಗುವರು ಎಂದು ಹೇಳಿದರು.


ದೇವಸ್ಥಾನಗಳ ಮೇಲಾಗುವ ವಿವಿಧ ಆಘಾತಗಳ ಬಗ್ಗೆ ‘ದೇವಸ್ಥಾನ ರಕ್ಷಣೆ’ ವಿಚಾರ ಸಂಕಿರಣದಲ್ಲಿ ಗಣ್ಯರ ಸಹಭಾಗ !
ತಮಿಳುನಾಡಿನ ‘ಟೆಂಪಲ್ ವರ್ಶಿಪರ್ಸ್ ಸೋಸೈಟಿ’ಯ ಉಪಾಧ್ಯಕ್ಷೆ ಶ್ರೀಮತಿ ಉಮಾ ಆನಂದನ್ ಇವರು ಈ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ, ಚರ್ಚ್ ಮತ್ತು ಮಸೀದಿಗಳಿಗಾಗಿ ಜಗತ್ತಿನಾದ್ಯಂತ ಎಲ್ಲ ಸ್ಥಳಗಳ ನಿಯಮಗಳು ಒಂದೇ ರೀತಿ ಇದೆ; ಆದರೆ ದೇವಸ್ಥಾನಗಳಿಗೆ ಮಾತ್ರ ಬೇರೆ ನಿಯಮಗಳಿವೆ. ಯಾವ ರೀತಿ ಚರ್ಚ್‌ನ ಫಾದರ್ ಹಾಗೂ ಮಸೀದಿಯ ಮೌಲ್ವಿಗಳು ಪ್ರಾರ್ಥನಾಸ್ಥಳಗಳ ವ್ಯವಸ್ಥಾಪನೆಯನ್ನು ನೋಡಿಕೊಳ್ಳುತ್ತಾರೆ, ಅದರಂತೆ ದೇವಸ್ಥಾನದ ವ್ಯವಸ್ಥಾಪನೆ ಭಕ್ತರಿಗೆ ನೀಡಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಆಂಧ್ರಪ್ರದೇಶದ ಇತಿಹಾಸಕಾರರಾದ ಶ್ರೀ. ಬಿ.ಕೆ.ಎಸ್.ಆರ್. ಅಯ್ಯಂಗಾರ ಇವರು ಮಾತನಾಡುತ್ತಾ, 100 ವರ್ಷಗಳ ಇತಿಹಾಸವಿರುವ ಮಠ, ದೇವಸ್ಥಾನದೊಂದಿಗೆ ಇತರ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳನ್ನು ‘ಸಾಂಸ್ಕೃತಿಕ ಬೀಡು’ ಎಂದು ಘೋಷಿಸಬೇಕು. ಅದೇ ರೀತಿ ಪ್ರಾಚೀನ ದೇವಸ್ಥಾನಗಳ ಪುನರ್‌ನಿರ್ಮಾಣ ಮಾಡುವಾಗ ಧಾರ್ಮಿಕ ಕ್ಷೇತ್ರದ ಗಣ್ಯರ/ಹಿರಿಯರ ಮಾರ್ಗದರ್ಶನವನ್ನು ಪಡೆಯಬೇಕು ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಹಾಗೂ ಛತ್ತೀಸಗಡ ರಾಜ್ಯ ಸಂಘಟಕರಾದ ಶ್ರೀ. ಸುನಿಲ ಘನವಟ ಇವರು ಮಾತನಾಡುತ್ತಾ, ದೇವಸ್ಥಾನ ಸಮಿತಿಯಲ್ಲಿ ಆಗುವಂತಹ ಭ್ರಷ್ಟಾಚಾರ, ಇದು ದೇವಸ್ಥಾನ ಸರಕಾರಿಕರಣದ ದುಷ್ಪರಿಣಾಮವಾಗಿದೆ. ಇದನ್ನು ತಡೆಯಲು ದೇವಸ್ಥಾನದ ವಿಶ್ವಸ್ಥರು ಹಾಗೂ ಹಿಂದುತ್ವನಿಷ್ಠರು ಮುಂದೆ ಬಂದು ರಾಷ್ಟ್ರೀಯ ಸ್ತರದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳುವುದು ಅಗತ್ಯವಿದೆ.

ಈ ಸಮಯದಲ್ಲಿ ಶ್ರೀ. ಘನವಟ ಇವರು ಮಾತನಾಡುತ್ತಾ ‘ರಾಮಮಂದಿರದಂತೆ ಕಾಶಿ, ಮಥುರಾದೊಂದಿಗೆ ದೇಶದಾದ್ಯಂತ 40 ಸಾವಿರ ದೇವಸ್ಥಾನಗಳನ್ನು ಮುಕ್ತಗೊಳಿಸಲು ಹಿಂದೂಗಳು ‘ರಾಷ್ಟ್ರೀಯ ದೇವಸ್ಥಾನ-ಸಂಸ್ಕೃತಿ ರಕ್ಷಾ ಅಭಿಯಾನ’ದಲ್ಲಿ ಸಹಭಾಗಿಯಾಗಬೇಕು ಎಂದು ಕರೆ ನೀಡಿದರು.

ಈ ಸಮಯದಲ್ಲಿ ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಷ್ರೀಯ ಅಧ್ಯಕ್ಷ ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ ಇವರು ಮಾತನಾಡುತ್ತಾ, ಜಾತ್ಯತೀತವೆಂದು ಹೇಳುವ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಕ್ಕೆ ಪಡೆಯುತ್ತದೆ; ಆದರೆ ಮಸೀದಿ ಅಥವಾ ಚರ್ಚ್ ವಶಕ್ಕೆ ಪಡೆಯುವುದಿಲ್ಲ. ದೇವಸ್ಥಾನಗಳ ಹಣವನ್ನು ಇತರ ಧರ್ಮದವರಿಗಾಗಿ ಖರ್ಚು ಮಾಡಲಾಗುತ್ತದೆ. ಸರಕಾರದ ಮಲತಾಯಿ ಧೋರಣೆ ವಿರುದ್ಧ ಹಿಂದೂಗಳು ಒತ್ತಡ ನಿರ್ಮಿಸಬೇಕು ಎಂದು ಹೇಳಿದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ