‘ ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಪೂರ್ವೋತ್ತರ ಭಾರತದಲ್ಲಿಯ ಮತಾಂತರ’ ಇದರ ಬಗ್ಗೆ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ವಿಚಾರ ಮಂಥನ !

ಮಂಗಳೂರು: ‘ಪನೂನ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಜಾರಿಗೊಳಿಸಲು ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್, ರಾಷ್ಟ್ರೀಯ ಸಂಯೋಜಕರು, ‘ಯುಥ ಫಾರ್ ಪನೂನ್ ಕಾಶ್ಮೀರ’

ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ ಸಿಕ್ಕಿದರೂ, ಜಿಹಾದಿ ಭಯೋತ್ಪಾದಕರು ತದನಂತರ 22 ಭಯೋತ್ಪಾದಕ ಚಟುವಟಿಕೆಗಳಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. 1990 ರಲ್ಲಿ ಕಾಶ್ಮೀರಿ ಹಿಂದೂಗಳ ವಂಶನಾಶದಂತೆ ಇಂದಿಗೂ ನಡೆಯುತ್ತಿದೆ. ಹೀಗಾದರೆ ಹಿಂದೂಗಳ ಪುನರ್ವಸತಿ ಹೇಗಾಗಬಹುದು ? ಇದನ್ನು ತಡೆಗಟ್ಟಲು ಕೇಂದ್ರ ಸರಕಾರವು ‘ಕಾಶ್ಮೀರಿ ಹಿಂದೂಗಳ ವಂಶನಾಶವಾಗಿದೆ’, ಎಂಬುದನ್ನು ಕಾನೂನು ಮಾಡಿ ಪ್ರಪ್ರಥಮವಾಗಿ ಒಪ್ಪಿಕೊಳ್ಳಬೇಕು. ನಾವು ಈ ಬಗ್ಗೆ ‘ಪನೂನ್ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಈ ಖಾಸಗೀ ವಿಧೇಯಕವನ್ನು ಮಾಡಿದ್ದೇವೆ. ಈ ವಿಧೇಯಕದ ಅನುಮೋದನೆಗಾಗಿ ಎಲ್ಲ ಶಾಸಕರು, ಅದೇರೀತಿ ಪ್ರಧಾನಿಯವರಿಗೆ ಕಳುಹಿಸಲಾಗಿದೆ. ಕೇಂದ್ರ ಸರಕಾರವು ಈ ಮಸೂದೆಯನ್ನು ಅನುಮೋದನೆಗೊಳಿಸಬೇಕು, ಎಂಬುದಕ್ಕಾಗಿ ದೇಶದ ಎಲ್ಲ ಹಿಂದೂ ಸಂಘಟನೆಗಳು, ಅದೇರೀತಿ ಹಿಂದೂಗಳೂ ಸಂಘಟಿತರಾಗಬೇಕು, ಎಂದು ‘ಯೂಥ ಫಾರ್ ಪನೂನ್ ಕಾಶ್ಮೀರ’ದ ರಾಷ್ಟ್ರೀಯ ಸಂಯೋಜಕರಾದ ಶ್ರೀ. ರಾಹುಲ್ ಕೌಲ್ ಇವರು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ ‘ಆನ್‌ಲೈನ್’ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ‘ಕಲಂ 370 ರದ್ದು ಪಡಿಸಿದ ನಂತರ ಕಾಶ್ಮೀರದಲ್ಲಿ ವರ್ತಮಾನ ಸ್ಥಿತಿ’ ಈ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಫೇಸ್‌ಬುಕ್ ಪೇಜ್’ ಮೂಲಕ ಈ ಅಧಿವೇಶನವನ್ನು ಸಾವಿರಕ್ಕಿಂತಲೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, ಲಕ್ಷ ಸಾವಿರಕ್ಕಿಂತಲೂ ಹೆಚ್ಚು ಜನರ ತನಕ ಈ ವಿಷಯವು ತಲುಪಿದೆ.

‘ಅಖಿಲ ಭಾರತವರ್ಷ ಧರ್ಮಸಂಘ ತಥಾ ಸ್ವಾಮಿ ಕರಪಾತ್ರಿ ಫೌಂಡೇಶನ’ನ ಪ.ಪೂ. ಡಾ. ಗುಣಪ್ರಕಾಶ ಚೈತನ್ಯಜಿ ಮಹಾರಾಜರು ಮಾತನಾಡುತ್ತಾ, ಸದ್ಯ ಆಗುತ್ತಿರುವ ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯು ನಮಗೆ ಭೋಗದ ದಿಕ್ಕಿನತ್ತ ಕೊಂಡೊಯ್ಯುತ್ತಿದೆ. ಅದು ನಮಗೆ ಭಗವಂತ ಪ್ರಾಪ್ತಿ ಮಾಡಿಸಿಕೊಡುವುದಿಲ್ಲ. ಅದಕ್ಕಾಗಿ ಸನಾತನ ಶಾಸ್ತ್ರದ ಅಗತ್ಯವಿದೆ. ಗೋಮಾತೆ, ವರ್ಣವ್ಯವಸ್ಥೆ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಎಲ್ಲ ಸಂತರು ಒಟ್ಟಾಗಬೇಕು, ಎಂದು ಕರೆ ನೀಡಿದ್ದಾರೆ.

‘ರಾಷ್ಟ್ರೀಯ ಇತಿಹಾಸ ಸಂಶೋಧನೆ ಹಾಗೂ ತುಲನಾತ್ಮಕ ಅಧ್ಯಯನ ಕೇಂದ್ರ’ದ ಅಧ್ಯಕ್ಷ ಶ್ರೀ. ನೀರಜ ಅತ್ರಿಯವರು ಮಾತನಾಡುತ್ತಾ, ಇಂದು ಹಿಂದೂಗಳು ಸತ್ಯದ ಪರವಾಗಿದ್ದರೂ ಹಿಂದೂಗಳು ಆಲಸ್ಯ ಹಾಗೂ ತಾಮಸಿಕ ಆಗಿದ್ದರಿಂದ ಹಿಂದೆ ಬಿದ್ದಿದ್ದಾರೆ, ಇನ್ನೊಂದೆಡೆ ಕ್ರೈಸ್ತರು ಹಾಗೂ ಇತರ ಪಂಥದವರು, ಅದೇರೀತಿ ಕಮ್ಯುನಿಸ್ಟ್‌ರು ತಮ್ಮ ವಿಚಾರಧಾರೆಯು ಅಸತ್ಯವಾಗಿದ್ದರೂ ಅದರ ಬಗ್ಗೆ ಬಿರುಸಿನ ಪ್ರಸಾರ ಮಾಡುತ್ತಿದ್ದಾರೆ. ಹೀಗೆ ನಾವು ಕೂಡ ಸತತವಾಗಿ ಬಿರುಸಿನ ಪ್ರಸಾರ ಮಾಡಬೇಕಿದೆ ಎಂದು ಹೇಳಿದರು.


‘ಪೂರ್ವ ಹಾಗೂ ಪುರ್ವೋತ್ತರ ಭಾರತದಲ್ಲಿ ಹೆಚ್ಚಾಗುತ್ತಿರುವ ಹಿಂದೂಗಳ ಮತಾಂತರ ಹಾಗೂ ಅದರ ಮೇಲಿನ ಉಪಾಯ’ ಈ ವಿಶೇಷ ವಿಚಾರ ಮಂಥನದಲ್ಲಿ ಗಣ್ಯರ ಸಹಭಾಗ ಈ ವಿಚಾರಮಂಥನದಲ್ಲಿ ಕೇಂದ್ರ ಸರಕಾರವು ಮತಾಂತರಕ್ಕಾಗಿ ವಿದೇಶದಿಂದ ಬರುವ ಬರುವ ನಿಧಿಯನ್ನು ಮೊದಲು ತಡೆಗಟ್ಟಿ ರಾಷ್ಟ್ರೀಯ ಮಟ್ಟದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೊಳಿಸಬೇಕು, ಎಂದು ಝಾರಖಂಡನ ‘ತರುಣ ಹಿಂದೂ’ವಿನ ಸಂಸ್ಥಾಪಕ ಅಧ್ಯಕ್ಷ ಡಾ. ನೀಲ ಮಾಧವ ದಾಸ ಇವರು ಒತ್ತಾಯಿಸಿದರು.

ತ್ರಿಪುರಾದಲ್ಲಿಯ ಶಾಂತಿ ಕಾಲಿ ಆಶ್ರಮದ ಪೂ. ಸ್ವಾಮಿ ಚಿತ್ತರಂಜನ ಮಹಾರಾಜರು ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಹೆಚ್ಚೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರೆ, ಬಂಗಾಲದಲ್ಲಿಯ ಶಾಸ್ತ್ರ ಧರ್ಮ ಪ್ರಸಾರ ಸಭೆಯ ಡಾ. ಕೌಶಿಕಚಂದ್ರ ಮಲ್ಲಿಕ ಇವರು ಬಂಗಾಲದಲ್ಲಿ ಮತಾಂತರ ನಿಷೇಧದೊಂದಿಗೆ ನುಸುಳುಖೋರರನ್ನೂ ತಡೆಗಟ್ಟುವುದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದು ಹಾಗೂ ಧರ್ಮಶಿಕ್ಷಣ ನೀಡುವ ಅನಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಮಯದಲ್ಲಿ ಮೇಘಾಲಯದ ಸಾಮಾಜಿಕ ಕಾರ್ಯಕರ್ತೆಯಾದ ಶ್ರೀಮತಿ ಈಸ್ಟರ್ ಖರಬಾಮೋನ್ ಇವರು ‘ಮೇಘಾಲಯದಲ್ಲಿ ಹಿಂದೂಗಳಿಗೆ ಶಾಲೆ, ಆಸ್ಪತ್ರೆ, ಸರಕಾರಿ ಉದ್ಯೋಗ, ನಿವಾಸ, ವಿವಾಹ, ವಿದೇಶಿ ಪ್ರಯಾಣ ಇತ್ಯಾದಿಗಳನ್ನು ನಿರ್ಲಕ್ಷಿಸಲಾಗುತ್ತದೆ; ಆದರೆ ಕ್ರೈಸ್ತ ಹಾಗೂ ಮುಸಲ್ಮಾನರಿಗೆ ಈ ಎಲ್ಲ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ನೀಡಲಾಗುತ್ತದೆ; ಆದ್ದರಿಂದ ಹಿಂದೂಗಳ ಮತಾಂತರವಾಗುತ್ತಿದ್ದಾರೆ ಎಂಬ ನೈಜ್ಯ ಸ್ಥಿತಿಯನ್ನು ಹೇಳಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ