‘ ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಪೂರ್ವೋತ್ತರ ಭಾರತದಲ್ಲಿಯ ಮತಾಂತರ’ ಇದರ ಬಗ್ಗೆ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ವಿಚಾರ ಮಂಥನ !

ಮಂಗಳೂರು: ‘ಪನೂನ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಜಾರಿಗೊಳಿಸಲು ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್, ರಾಷ್ಟ್ರೀಯ ಸಂಯೋಜಕರು, ‘ಯುಥ ಫಾರ್ ಪನೂನ್ ಕಾಶ್ಮೀರ’

ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ ಸಿಕ್ಕಿದರೂ, ಜಿಹಾದಿ ಭಯೋತ್ಪಾದಕರು ತದನಂತರ 22 ಭಯೋತ್ಪಾದಕ ಚಟುವಟಿಕೆಗಳಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. 1990 ರಲ್ಲಿ ಕಾಶ್ಮೀರಿ ಹಿಂದೂಗಳ ವಂಶನಾಶದಂತೆ ಇಂದಿಗೂ ನಡೆಯುತ್ತಿದೆ. ಹೀಗಾದರೆ ಹಿಂದೂಗಳ ಪುನರ್ವಸತಿ ಹೇಗಾಗಬಹುದು ? ಇದನ್ನು ತಡೆಗಟ್ಟಲು ಕೇಂದ್ರ ಸರಕಾರವು ‘ಕಾಶ್ಮೀರಿ ಹಿಂದೂಗಳ ವಂಶನಾಶವಾಗಿದೆ’, ಎಂಬುದನ್ನು ಕಾನೂನು ಮಾಡಿ ಪ್ರಪ್ರಥಮವಾಗಿ ಒಪ್ಪಿಕೊಳ್ಳಬೇಕು. ನಾವು ಈ ಬಗ್ಗೆ ‘ಪನೂನ್ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಈ ಖಾಸಗೀ ವಿಧೇಯಕವನ್ನು ಮಾಡಿದ್ದೇವೆ. ಈ ವಿಧೇಯಕದ ಅನುಮೋದನೆಗಾಗಿ ಎಲ್ಲ ಶಾಸಕರು, ಅದೇರೀತಿ ಪ್ರಧಾನಿಯವರಿಗೆ ಕಳುಹಿಸಲಾಗಿದೆ. ಕೇಂದ್ರ ಸರಕಾರವು ಈ ಮಸೂದೆಯನ್ನು ಅನುಮೋದನೆಗೊಳಿಸಬೇಕು, ಎಂಬುದಕ್ಕಾಗಿ ದೇಶದ ಎಲ್ಲ ಹಿಂದೂ ಸಂಘಟನೆಗಳು, ಅದೇರೀತಿ ಹಿಂದೂಗಳೂ ಸಂಘಟಿತರಾಗಬೇಕು, ಎಂದು ‘ಯೂಥ ಫಾರ್ ಪನೂನ್ ಕಾಶ್ಮೀರ’ದ ರಾಷ್ಟ್ರೀಯ ಸಂಯೋಜಕರಾದ ಶ್ರೀ. ರಾಹುಲ್ ಕೌಲ್ ಇವರು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ ‘ಆನ್‌ಲೈನ್’ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ‘ಕಲಂ 370 ರದ್ದು ಪಡಿಸಿದ ನಂತರ ಕಾಶ್ಮೀರದಲ್ಲಿ ವರ್ತಮಾನ ಸ್ಥಿತಿ’ ಈ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಫೇಸ್‌ಬುಕ್ ಪೇಜ್’ ಮೂಲಕ ಈ ಅಧಿವೇಶನವನ್ನು ಸಾವಿರಕ್ಕಿಂತಲೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, ಲಕ್ಷ ಸಾವಿರಕ್ಕಿಂತಲೂ ಹೆಚ್ಚು ಜನರ ತನಕ ಈ ವಿಷಯವು ತಲುಪಿದೆ.

‘ಅಖಿಲ ಭಾರತವರ್ಷ ಧರ್ಮಸಂಘ ತಥಾ ಸ್ವಾಮಿ ಕರಪಾತ್ರಿ ಫೌಂಡೇಶನ’ನ ಪ.ಪೂ. ಡಾ. ಗುಣಪ್ರಕಾಶ ಚೈತನ್ಯಜಿ ಮಹಾರಾಜರು ಮಾತನಾಡುತ್ತಾ, ಸದ್ಯ ಆಗುತ್ತಿರುವ ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯು ನಮಗೆ ಭೋಗದ ದಿಕ್ಕಿನತ್ತ ಕೊಂಡೊಯ್ಯುತ್ತಿದೆ. ಅದು ನಮಗೆ ಭಗವಂತ ಪ್ರಾಪ್ತಿ ಮಾಡಿಸಿಕೊಡುವುದಿಲ್ಲ. ಅದಕ್ಕಾಗಿ ಸನಾತನ ಶಾಸ್ತ್ರದ ಅಗತ್ಯವಿದೆ. ಗೋಮಾತೆ, ವರ್ಣವ್ಯವಸ್ಥೆ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಎಲ್ಲ ಸಂತರು ಒಟ್ಟಾಗಬೇಕು, ಎಂದು ಕರೆ ನೀಡಿದ್ದಾರೆ.

‘ರಾಷ್ಟ್ರೀಯ ಇತಿಹಾಸ ಸಂಶೋಧನೆ ಹಾಗೂ ತುಲನಾತ್ಮಕ ಅಧ್ಯಯನ ಕೇಂದ್ರ’ದ ಅಧ್ಯಕ್ಷ ಶ್ರೀ. ನೀರಜ ಅತ್ರಿಯವರು ಮಾತನಾಡುತ್ತಾ, ಇಂದು ಹಿಂದೂಗಳು ಸತ್ಯದ ಪರವಾಗಿದ್ದರೂ ಹಿಂದೂಗಳು ಆಲಸ್ಯ ಹಾಗೂ ತಾಮಸಿಕ ಆಗಿದ್ದರಿಂದ ಹಿಂದೆ ಬಿದ್ದಿದ್ದಾರೆ, ಇನ್ನೊಂದೆಡೆ ಕ್ರೈಸ್ತರು ಹಾಗೂ ಇತರ ಪಂಥದವರು, ಅದೇರೀತಿ ಕಮ್ಯುನಿಸ್ಟ್‌ರು ತಮ್ಮ ವಿಚಾರಧಾರೆಯು ಅಸತ್ಯವಾಗಿದ್ದರೂ ಅದರ ಬಗ್ಗೆ ಬಿರುಸಿನ ಪ್ರಸಾರ ಮಾಡುತ್ತಿದ್ದಾರೆ. ಹೀಗೆ ನಾವು ಕೂಡ ಸತತವಾಗಿ ಬಿರುಸಿನ ಪ್ರಸಾರ ಮಾಡಬೇಕಿದೆ ಎಂದು ಹೇಳಿದರು.


‘ಪೂರ್ವ ಹಾಗೂ ಪುರ್ವೋತ್ತರ ಭಾರತದಲ್ಲಿ ಹೆಚ್ಚಾಗುತ್ತಿರುವ ಹಿಂದೂಗಳ ಮತಾಂತರ ಹಾಗೂ ಅದರ ಮೇಲಿನ ಉಪಾಯ’ ಈ ವಿಶೇಷ ವಿಚಾರ ಮಂಥನದಲ್ಲಿ ಗಣ್ಯರ ಸಹಭಾಗ ಈ ವಿಚಾರಮಂಥನದಲ್ಲಿ ಕೇಂದ್ರ ಸರಕಾರವು ಮತಾಂತರಕ್ಕಾಗಿ ವಿದೇಶದಿಂದ ಬರುವ ಬರುವ ನಿಧಿಯನ್ನು ಮೊದಲು ತಡೆಗಟ್ಟಿ ರಾಷ್ಟ್ರೀಯ ಮಟ್ಟದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೊಳಿಸಬೇಕು, ಎಂದು ಝಾರಖಂಡನ ‘ತರುಣ ಹಿಂದೂ’ವಿನ ಸಂಸ್ಥಾಪಕ ಅಧ್ಯಕ್ಷ ಡಾ. ನೀಲ ಮಾಧವ ದಾಸ ಇವರು ಒತ್ತಾಯಿಸಿದರು.

ತ್ರಿಪುರಾದಲ್ಲಿಯ ಶಾಂತಿ ಕಾಲಿ ಆಶ್ರಮದ ಪೂ. ಸ್ವಾಮಿ ಚಿತ್ತರಂಜನ ಮಹಾರಾಜರು ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಹೆಚ್ಚೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರೆ, ಬಂಗಾಲದಲ್ಲಿಯ ಶಾಸ್ತ್ರ ಧರ್ಮ ಪ್ರಸಾರ ಸಭೆಯ ಡಾ. ಕೌಶಿಕಚಂದ್ರ ಮಲ್ಲಿಕ ಇವರು ಬಂಗಾಲದಲ್ಲಿ ಮತಾಂತರ ನಿಷೇಧದೊಂದಿಗೆ ನುಸುಳುಖೋರರನ್ನೂ ತಡೆಗಟ್ಟುವುದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದು ಹಾಗೂ ಧರ್ಮಶಿಕ್ಷಣ ನೀಡುವ ಅನಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಮಯದಲ್ಲಿ ಮೇಘಾಲಯದ ಸಾಮಾಜಿಕ ಕಾರ್ಯಕರ್ತೆಯಾದ ಶ್ರೀಮತಿ ಈಸ್ಟರ್ ಖರಬಾಮೋನ್ ಇವರು ‘ಮೇಘಾಲಯದಲ್ಲಿ ಹಿಂದೂಗಳಿಗೆ ಶಾಲೆ, ಆಸ್ಪತ್ರೆ, ಸರಕಾರಿ ಉದ್ಯೋಗ, ನಿವಾಸ, ವಿವಾಹ, ವಿದೇಶಿ ಪ್ರಯಾಣ ಇತ್ಯಾದಿಗಳನ್ನು ನಿರ್ಲಕ್ಷಿಸಲಾಗುತ್ತದೆ; ಆದರೆ ಕ್ರೈಸ್ತ ಹಾಗೂ ಮುಸಲ್ಮಾನರಿಗೆ ಈ ಎಲ್ಲ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ನೀಡಲಾಗುತ್ತದೆ; ಆದ್ದರಿಂದ ಹಿಂದೂಗಳ ಮತಾಂತರವಾಗುತ್ತಿದ್ದಾರೆ ಎಂಬ ನೈಜ್ಯ ಸ್ಥಿತಿಯನ್ನು ಹೇಳಿದರು.

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 27 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 52 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 28 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 37 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 55 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 32 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ