‘ ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಪೂರ್ವೋತ್ತರ ಭಾರತದಲ್ಲಿಯ ಮತಾಂತರ’ ಇದರ ಬಗ್ಗೆ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ವಿಚಾರ ಮಂಥನ !

ಮಂಗಳೂರು: ‘ಪನೂನ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಜಾರಿಗೊಳಿಸಲು ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್, ರಾಷ್ಟ್ರೀಯ ಸಂಯೋಜಕರು, ‘ಯುಥ ಫಾರ್ ಪನೂನ್ ಕಾಶ್ಮೀರ’

ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ ಸಿಕ್ಕಿದರೂ, ಜಿಹಾದಿ ಭಯೋತ್ಪಾದಕರು ತದನಂತರ 22 ಭಯೋತ್ಪಾದಕ ಚಟುವಟಿಕೆಗಳಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. 1990 ರಲ್ಲಿ ಕಾಶ್ಮೀರಿ ಹಿಂದೂಗಳ ವಂಶನಾಶದಂತೆ ಇಂದಿಗೂ ನಡೆಯುತ್ತಿದೆ. ಹೀಗಾದರೆ ಹಿಂದೂಗಳ ಪುನರ್ವಸತಿ ಹೇಗಾಗಬಹುದು ? ಇದನ್ನು ತಡೆಗಟ್ಟಲು ಕೇಂದ್ರ ಸರಕಾರವು ‘ಕಾಶ್ಮೀರಿ ಹಿಂದೂಗಳ ವಂಶನಾಶವಾಗಿದೆ’, ಎಂಬುದನ್ನು ಕಾನೂನು ಮಾಡಿ ಪ್ರಪ್ರಥಮವಾಗಿ ಒಪ್ಪಿಕೊಳ್ಳಬೇಕು. ನಾವು ಈ ಬಗ್ಗೆ ‘ಪನೂನ್ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಈ ಖಾಸಗೀ ವಿಧೇಯಕವನ್ನು ಮಾಡಿದ್ದೇವೆ. ಈ ವಿಧೇಯಕದ ಅನುಮೋದನೆಗಾಗಿ ಎಲ್ಲ ಶಾಸಕರು, ಅದೇರೀತಿ ಪ್ರಧಾನಿಯವರಿಗೆ ಕಳುಹಿಸಲಾಗಿದೆ. ಕೇಂದ್ರ ಸರಕಾರವು ಈ ಮಸೂದೆಯನ್ನು ಅನುಮೋದನೆಗೊಳಿಸಬೇಕು, ಎಂಬುದಕ್ಕಾಗಿ ದೇಶದ ಎಲ್ಲ ಹಿಂದೂ ಸಂಘಟನೆಗಳು, ಅದೇರೀತಿ ಹಿಂದೂಗಳೂ ಸಂಘಟಿತರಾಗಬೇಕು, ಎಂದು ‘ಯೂಥ ಫಾರ್ ಪನೂನ್ ಕಾಶ್ಮೀರ’ದ ರಾಷ್ಟ್ರೀಯ ಸಂಯೋಜಕರಾದ ಶ್ರೀ. ರಾಹುಲ್ ಕೌಲ್ ಇವರು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ ‘ಆನ್‌ಲೈನ್’ 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ‘ಕಲಂ 370 ರದ್ದು ಪಡಿಸಿದ ನಂತರ ಕಾಶ್ಮೀರದಲ್ಲಿ ವರ್ತಮಾನ ಸ್ಥಿತಿ’ ಈ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಫೇಸ್‌ಬುಕ್ ಪೇಜ್’ ಮೂಲಕ ಈ ಅಧಿವೇಶನವನ್ನು ಸಾವಿರಕ್ಕಿಂತಲೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, ಲಕ್ಷ ಸಾವಿರಕ್ಕಿಂತಲೂ ಹೆಚ್ಚು ಜನರ ತನಕ ಈ ವಿಷಯವು ತಲುಪಿದೆ.

‘ಅಖಿಲ ಭಾರತವರ್ಷ ಧರ್ಮಸಂಘ ತಥಾ ಸ್ವಾಮಿ ಕರಪಾತ್ರಿ ಫೌಂಡೇಶನ’ನ ಪ.ಪೂ. ಡಾ. ಗುಣಪ್ರಕಾಶ ಚೈತನ್ಯಜಿ ಮಹಾರಾಜರು ಮಾತನಾಡುತ್ತಾ, ಸದ್ಯ ಆಗುತ್ತಿರುವ ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯು ನಮಗೆ ಭೋಗದ ದಿಕ್ಕಿನತ್ತ ಕೊಂಡೊಯ್ಯುತ್ತಿದೆ. ಅದು ನಮಗೆ ಭಗವಂತ ಪ್ರಾಪ್ತಿ ಮಾಡಿಸಿಕೊಡುವುದಿಲ್ಲ. ಅದಕ್ಕಾಗಿ ಸನಾತನ ಶಾಸ್ತ್ರದ ಅಗತ್ಯವಿದೆ. ಗೋಮಾತೆ, ವರ್ಣವ್ಯವಸ್ಥೆ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಎಲ್ಲ ಸಂತರು ಒಟ್ಟಾಗಬೇಕು, ಎಂದು ಕರೆ ನೀಡಿದ್ದಾರೆ.

‘ರಾಷ್ಟ್ರೀಯ ಇತಿಹಾಸ ಸಂಶೋಧನೆ ಹಾಗೂ ತುಲನಾತ್ಮಕ ಅಧ್ಯಯನ ಕೇಂದ್ರ’ದ ಅಧ್ಯಕ್ಷ ಶ್ರೀ. ನೀರಜ ಅತ್ರಿಯವರು ಮಾತನಾಡುತ್ತಾ, ಇಂದು ಹಿಂದೂಗಳು ಸತ್ಯದ ಪರವಾಗಿದ್ದರೂ ಹಿಂದೂಗಳು ಆಲಸ್ಯ ಹಾಗೂ ತಾಮಸಿಕ ಆಗಿದ್ದರಿಂದ ಹಿಂದೆ ಬಿದ್ದಿದ್ದಾರೆ, ಇನ್ನೊಂದೆಡೆ ಕ್ರೈಸ್ತರು ಹಾಗೂ ಇತರ ಪಂಥದವರು, ಅದೇರೀತಿ ಕಮ್ಯುನಿಸ್ಟ್‌ರು ತಮ್ಮ ವಿಚಾರಧಾರೆಯು ಅಸತ್ಯವಾಗಿದ್ದರೂ ಅದರ ಬಗ್ಗೆ ಬಿರುಸಿನ ಪ್ರಸಾರ ಮಾಡುತ್ತಿದ್ದಾರೆ. ಹೀಗೆ ನಾವು ಕೂಡ ಸತತವಾಗಿ ಬಿರುಸಿನ ಪ್ರಸಾರ ಮಾಡಬೇಕಿದೆ ಎಂದು ಹೇಳಿದರು.


‘ಪೂರ್ವ ಹಾಗೂ ಪುರ್ವೋತ್ತರ ಭಾರತದಲ್ಲಿ ಹೆಚ್ಚಾಗುತ್ತಿರುವ ಹಿಂದೂಗಳ ಮತಾಂತರ ಹಾಗೂ ಅದರ ಮೇಲಿನ ಉಪಾಯ’ ಈ ವಿಶೇಷ ವಿಚಾರ ಮಂಥನದಲ್ಲಿ ಗಣ್ಯರ ಸಹಭಾಗ ಈ ವಿಚಾರಮಂಥನದಲ್ಲಿ ಕೇಂದ್ರ ಸರಕಾರವು ಮತಾಂತರಕ್ಕಾಗಿ ವಿದೇಶದಿಂದ ಬರುವ ಬರುವ ನಿಧಿಯನ್ನು ಮೊದಲು ತಡೆಗಟ್ಟಿ ರಾಷ್ಟ್ರೀಯ ಮಟ್ಟದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೊಳಿಸಬೇಕು, ಎಂದು ಝಾರಖಂಡನ ‘ತರುಣ ಹಿಂದೂ’ವಿನ ಸಂಸ್ಥಾಪಕ ಅಧ್ಯಕ್ಷ ಡಾ. ನೀಲ ಮಾಧವ ದಾಸ ಇವರು ಒತ್ತಾಯಿಸಿದರು.

ತ್ರಿಪುರಾದಲ್ಲಿಯ ಶಾಂತಿ ಕಾಲಿ ಆಶ್ರಮದ ಪೂ. ಸ್ವಾಮಿ ಚಿತ್ತರಂಜನ ಮಹಾರಾಜರು ಹಿಂದೂಗಳ ಮತಾಂತರವನ್ನು ತಡೆಗಟ್ಟಲು ಹೆಚ್ಚೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರೆ, ಬಂಗಾಲದಲ್ಲಿಯ ಶಾಸ್ತ್ರ ಧರ್ಮ ಪ್ರಸಾರ ಸಭೆಯ ಡಾ. ಕೌಶಿಕಚಂದ್ರ ಮಲ್ಲಿಕ ಇವರು ಬಂಗಾಲದಲ್ಲಿ ಮತಾಂತರ ನಿಷೇಧದೊಂದಿಗೆ ನುಸುಳುಖೋರರನ್ನೂ ತಡೆಗಟ್ಟುವುದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದು ಹಾಗೂ ಧರ್ಮಶಿಕ್ಷಣ ನೀಡುವ ಅನಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಮಯದಲ್ಲಿ ಮೇಘಾಲಯದ ಸಾಮಾಜಿಕ ಕಾರ್ಯಕರ್ತೆಯಾದ ಶ್ರೀಮತಿ ಈಸ್ಟರ್ ಖರಬಾಮೋನ್ ಇವರು ‘ಮೇಘಾಲಯದಲ್ಲಿ ಹಿಂದೂಗಳಿಗೆ ಶಾಲೆ, ಆಸ್ಪತ್ರೆ, ಸರಕಾರಿ ಉದ್ಯೋಗ, ನಿವಾಸ, ವಿವಾಹ, ವಿದೇಶಿ ಪ್ರಯಾಣ ಇತ್ಯಾದಿಗಳನ್ನು ನಿರ್ಲಕ್ಷಿಸಲಾಗುತ್ತದೆ; ಆದರೆ ಕ್ರೈಸ್ತ ಹಾಗೂ ಮುಸಲ್ಮಾನರಿಗೆ ಈ ಎಲ್ಲ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ನೀಡಲಾಗುತ್ತದೆ; ಆದ್ದರಿಂದ ಹಿಂದೂಗಳ ಮತಾಂತರವಾಗುತ್ತಿದ್ದಾರೆ ಎಂಬ ನೈಜ್ಯ ಸ್ಥಿತಿಯನ್ನು ಹೇಳಿದರು.

Spread the love
  • Related Posts

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…

    Spread the love

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ…

    Spread the love

    You Missed

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 8 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 41 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 24 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 108 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 45 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು