ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 15 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ