ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ