ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ