ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ