ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    You Missed

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 5 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 118 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 187 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 66 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 242 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 194 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ