ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 45 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 89 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ