ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಾಧು ಕಾಂತಿ ಪ್ರಸಾದ ಇವರು ಕೇಸರಿ ವಸ್ತ್ರವನ್ನು ಹಾಕಿಕೊಂಡಿದ್ದರೆಂದು ಅನಸ ಕುರೈಶಿ ನಿಂದಿಸಿದನು ಹಾಗೂ ಇದನ್ನು ವಿರೋಧಿಸಿದ್ದರಿಂದ ಮತಾಂಧನು ಹಿಗ್ಗಾಮುಗ್ಗಾ ಥಳಿಸುತ್ತಾ ಆ ಸಾಧುವಿನ ಹತ್ಯೆ ಮಾಡಿದನು. ಇದರಿಂದ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಕೇಸರಿ ವಸ್ತ್ರ ಹಾಕುವವರನ್ನು ಗುರಿಯಾಗಿಸುತ್ತಿದ್ದಾರೆ, ಎಂಬುದು ಗಮನಕ್ಕೆ ಬರುತ್ತದೆ. ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ, ಅನಸ ಕುರೈಶಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇದೆಯೋ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

ಮೊದಲಿಗೆ ಪಾಲ್ಘರ್, ಬುಲಂದಶಹರ್, ನಾಂದೇಡ್ ಮತ್ತು ಈಗ ಮೀರತ್‌ನಲ್ಲಿ ಸನ್ಯಾಸಿಗಳ ಹತ್ಯಾ ಸರಣಿ ನಡೆಯುತ್ತಲೇ ಇದೆ. ಈ ಘಟನೆಗಳಿಂದ ಹಿಂದೂ ಸಮಾಜದಲ್ಲಿ ಆಕ್ರೋಶದ ಭಾವನೆ ಇದೆ. ಒಂದುವೇಳೆ ಈ ಘಟನೆ ಮುಸಲ್ಮಾನರ ಅಥವಾ ಇನ್ನೊಂದು ಸಮುದಾಯದ ವ್ಯಕ್ತಿಯ ವಿಷಯದಲ್ಲಿ ಸಂಭವಿಸಿದ್ದರೆ, ಜಾತ್ಯತೀತವಾದಿಗಳು ‘ಮಾಬ್ ಲಿಂಚಿಂಗ್’ ಹೇಳುತ್ತಾ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡಿ ಹಿಂದುತ್ವವನ್ನು ದೂಷಿಸುತ್ತಿದ್ದರು; ಆದರೆ ಮೃತಪಟ್ಟವರು ಹಿಂದೂ ಸಾಧು ಮತ್ತು ಹಂತಕ ಮುಸಲ್ಮಾನನಾಗಿದ್ದಾನೆ. ಆದ್ದರಿಂದ ಯಾವುದೇ ಪ್ರಗತಿಪರ ನಾಯಕನು ಖಂಡಿಸಿಲ್ಲ. ಇದು ಭಾರತದಲ್ಲಿ ಜಾತ್ಯತೀತತೆಯ ಸೋಲಾಗಿದೆ. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಸಾಧುಗಳ ಹತ್ಯೆಯ ಮೂಲವನ್ನು ಪತ್ತೆ ಹಚ್ಚಿ ಹಿಂದೂಗಳಿಗೆ ನ್ಯಾಯ ನೀಡುತ್ತಾರೆ ಎಂದು ನಾವು ಆಶಿಸುತ್ತೇವೆ ಎಂದೂ ಶ್ರೀ. ಶಿಂದೆಯವರು ಪ್ರಕಟಣೆಯಲ್ಲಿ ಹೇಳಿಕೆ ನಿಡಿದ್ದಾರೆ

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 62 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 26 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 81 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 70 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 45 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ