“ತಾಂಟ್ರೇ ಬಾ ತಾಂಟ್” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಎಸ್.ಡಿ.ಪಿ.ಐ. ಮುಖಂಡನನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ-ಹಿಂಜಾವೇ

ಬಂಟ್ವಾಳ: ಈಗಾಗಲೇ ಎರಡೆರಡು ಬಾರಿ ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗವಾಗಿ “ತಾಂಟ್ರೇ ಬಾ ತಾಂಟ್” ಎಂಬ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗುತ್ತಿರುವ SDPI ಮುಖಂಡರ ವಿರುದ್ಧ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಂಡಿಲ್ಲವೆಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.

ಎಸ್.ಡಿ.ಪಿ.ಐ. ಮುಖಂಡ ರಿಯಾಝ್ ಫರಂಗಿಪೇಟೆ ಪದೇ ಪದೇ ನೀಡಿರುವ ಹೇಳಿಕೆಗಳ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ದೂರು ನೀಡಲಾಗಿದ್ದು, ಇನ್ನೂ ಇಲಾಖೆ ಕ್ರಮ ಕೈಗೊಂಡಿಲ್ಲ. ರಿಯಾಝ್ ಫರಂಗಿಪೇಟೆಯನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ನಾವು ತಯಾರಿದ್ದೇವೆ ಎಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕ ಹೇಳಿದೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಜಿಲ್ಲಾ ಹಿಂಜಾವೇ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಹಿಂಜಾವೇ ರಾಜ್ಯ ಗೌರವಾಧ್ಯಕ್ಷ ವಜ್ರದೇಹಿ ಸ್ವಾಮೀಜಿ ಸಹಿತ ಹಿಂದು ಮುಖಂಡರನ್ನು ಗುರಿಯಾಗಿಸಿಕೊಂಡು ರಿಯಾಝ್ ಭಾಷಣಗಳನ್ನು ಮಾಡುತ್ತಿದ್ದು, ಇದು ಹಿಂದುಗಳನ್ನು ಪ್ರಚೋದಿಸುವಂತಿದೆ. ಈ ರೀತಿ ಭಾಷಣ ಮಾಡಿ, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವುದರ ವಿರುದ್ಧ ನಾವು ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ನೀಡಿದ್ದೇವೆ. ಆದರೆ ಪೊಲೀಸರು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ. ವಿಳಂಗ ಗತಿ ಅನುಸರಿಸಿದರೆ, ಹೋರಾಟಕ್ಕೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ರಿಯಾಝ್ ಫರಂಗಿಪೇಟೆಯನ್ನು ಬಂಧಿಸಿ, ಜಿಲ್ಲೆಯಿಂದ ಗಡೀಪಾರುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ಮುಂದಿನ ದಿನಗಳಲ್ಲಿ ಈತ ಇದೇರೀತಿ ಸಂಘಪರಿವಾರದ ನಾಯಕರನ್ನು ಸಂಘರ್ಷಕ್ಕೆ ಆಹ್ವಾನ ನೀಡುವ ಹೇಳಿಕೆನ್ನು ಮುಂದುವರಿಸಿದಲ್ಲಿ ಹಿ.ಜಾ.ವೇ.ಯ ಕಾರ್ಯಕರ್ತರು ಕೂಡ ಸೂಕ್ತ ಉತ್ತರ ನೀಡಲಿದ್ದು, ಈ ಸಂದರ್ಭದಲ್ಲಿ ಅಗಬಹುದಾದ ಯಾವುದೇ ಅನಾಹುತಕ್ಕೆ ಪೊಲೀಸ್ ಇಲಾಖೆಯೇ ಕಾರಣವಾಗಲಿದೆ. ಇದೇ ರೀತಿ ಹೇಳಿಕೆಗಳನ್ನು ನೀಡಿದರೆ, ಹಿಂದು ಸಮಾಜ ಸುಮ್ಮನೆ ಕೂರುವುದಿಲ್ಲ, ಮುಂದಿನ ದಿನಗಳಲ್ಲಿ ಅದಕ್ಕೆ ಬೇಕಾದ ಉತ್ತರವನ್ನು ಕೊಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು. ಇದೇ ವೇಳೆ ಜಿಲ್ಲೆಯಲ್ಲಿ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳನ್ನು ಅವರು ಖಂಡಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ