ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

    Spread the love

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಬೆಳ್ತಂಗಡಿ: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಪ್ರಗತಿ ಸ್ವ-ಸಹಾಯ ಸಂಘದ ಸದಸ್ಯರಾಗಿರುವ ಮಿನಾಕ್ಷಿ ಮತ್ತು ಮಹಾಬಲಗೌಡ ದಂಪತಿಯ ಪುತ್ರಿ ಕುIಪ್ರಾಪ್ತಿ ಎಂ. ಗೌಡ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ…

    Spread the love

    You Missed

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 15 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 55 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 17 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 76 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 74 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 78 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು