ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    Manglore: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದ (MoU) ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರುನಲ್ಲಿ ಏಪ್ರಿಲ್ 4, 2026ರಂದು ಹೊರಡಿಸಿದ ಈ ಆದೇಶದಲ್ಲಿ, ಜಿಲ್ಲೆಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ…

    Spread the love

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

      ಬರಹ:🖋️ ನರೇಂದ್ರ ರೈ ದೇರ್ಲ     ನಮ್ಮನ್ನು ಸದಾ ಪೊರೆಯುವ ಹಸಿರುಗೋಡೆ ಪಶ್ಚಿಮ ಘಟ್ಟಕ್ಕೆ  ಮುಂದಿನ ಎರಡು ತಿಂಗಳು ಸಂಕಟದ ಕಾಲ. ಜೂನ್ ತಿಂಗಳ ಮೊದಲ ಮಳೆಯವರೆಗೂ ಕಾಡಿನ ಹೃದಯವೇ ಒಣಗಿಬಿಡುವ ಕಡು ಸುಡುಗಾಲವಿದು . ಮರಗಳ ನೆರಳೂ ತಣ್ಣಗೆ ತಂಪು ಕೊಡಲು…

    Spread the love

    You Missed

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 46 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 24 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 49 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 69 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 16 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 39 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್