ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 5 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ