ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಹಲವು ವರ್ಷಗಳಿಂದ ಡಾಮರೀಕರಣದ ಭಾಗ್ಯವಿಲ್ಲ; ಗುಂಡಿಗಳ ರಸ್ತೆಯಾಗಿ ಮಾರ್ಪಟ್ಟ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ, ಜೀವ ಕೈಯಲ್ಲಿ ಹಿಡಿದು ಸಂಚಾರ! ಬೆಳ್ತಂಗಡಿ: ಧರ್ಮಸ್ಥಳ–ಪಜಿರಡ್ಕ ಸಂಪರ್ಕಿಸುವ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ ಕಳೆದ 17ವರ್ಷಗಳ ಹಿಂದೆ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಆಗಿದ್ದು ಇದೀಗ ಮತ್ತೆ…

    Spread the love

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ. ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ…

    Spread the love

    You Missed

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 69 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 99 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 49 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 41 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 58 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 144 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ