ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ…

    Spread the love

    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್…

    Spread the love

    You Missed

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    • By admin
    • May 6, 2026
    • 8 views
    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    • By admin
    • May 6, 2026
    • 15 views
    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • May 5, 2026
    • 162 views
    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    • By admin
    • May 5, 2026
    • 40 views
    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 469 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 66 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು