ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 12 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ