ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ